<p><strong>ರೋಣ:</strong> ಪಟ್ಟಣದ ಹೊರವಲಯದಲ್ಲಿರುವ ಬಸ್ ಡಿಪೋ ಸಮೀಪದಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಘಟನೆಯಲ್ಲಿ ಗದಗ ನಗರದ ದರ್ಶನ್ ರಾಜ್ ಪುರೋಹಿತ್ (22), ಶೌಖತ್ ಅಲಿ ಖಾನ್ (23), ಮೈಪೂಸ್ ಆಲಂ (22) ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಮುಲ್ಲಾ ಅವರಿಗೆ ರೋಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಗದಗ ನಗರದಿಂದ ಸ್ನೇಹಿತರೊಂದಿಗೆ ರೋಣಕ್ಕೆ ಬಂದಿದ್ದ ನಾಲ್ವರು ಯುವಕರು ವಾಪಸ್ ಊರಿಗೆ ಹೋಗುವಾಗ ಈ ಘಟನೆ ನಡೆದಿದೆ.</p>.<p>ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯರು ಹಾಗೂ ರಸ್ತೆ ಬದಿ ಇದ್ದ ಸಾರ್ವಜನಿಕರು ಕಾರ್ನಲ್ಲೇ ಮೃತಪಟ್ಟವರು ಹಾಗೂ ಗಾಯಗೊಂಡಿಡ್ಡ ಯುವಕನನ್ನು ಹೊರಕ್ಕೆಳೆದು ತೆಗೆದಿದ್ದಾರೆ. ದೇಹಗಳನ್ನು ಹೊರತೆಗೆದ ಕೂಡಲೇ ಡೀಸೆಲ್ ಸೋರಿಕೆಯಾಗಿ ಕಾರ್ನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು, ಭಾಗಶಃ ಕಾರು ಸುಟ್ಟುಹೋಗಿದೆ.</p>.<p>ವಿಷಯ ತಿಳಿದ ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದವರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ:</strong> ಪಟ್ಟಣದ ಹೊರವಲಯದಲ್ಲಿರುವ ಬಸ್ ಡಿಪೋ ಸಮೀಪದಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಘಟನೆಯಲ್ಲಿ ಗದಗ ನಗರದ ದರ್ಶನ್ ರಾಜ್ ಪುರೋಹಿತ್ (22), ಶೌಖತ್ ಅಲಿ ಖಾನ್ (23), ಮೈಪೂಸ್ ಆಲಂ (22) ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಮುಲ್ಲಾ ಅವರಿಗೆ ರೋಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಗದಗ ನಗರದಿಂದ ಸ್ನೇಹಿತರೊಂದಿಗೆ ರೋಣಕ್ಕೆ ಬಂದಿದ್ದ ನಾಲ್ವರು ಯುವಕರು ವಾಪಸ್ ಊರಿಗೆ ಹೋಗುವಾಗ ಈ ಘಟನೆ ನಡೆದಿದೆ.</p>.<p>ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯರು ಹಾಗೂ ರಸ್ತೆ ಬದಿ ಇದ್ದ ಸಾರ್ವಜನಿಕರು ಕಾರ್ನಲ್ಲೇ ಮೃತಪಟ್ಟವರು ಹಾಗೂ ಗಾಯಗೊಂಡಿಡ್ಡ ಯುವಕನನ್ನು ಹೊರಕ್ಕೆಳೆದು ತೆಗೆದಿದ್ದಾರೆ. ದೇಹಗಳನ್ನು ಹೊರತೆಗೆದ ಕೂಡಲೇ ಡೀಸೆಲ್ ಸೋರಿಕೆಯಾಗಿ ಕಾರ್ನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು, ಭಾಗಶಃ ಕಾರು ಸುಟ್ಟುಹೋಗಿದೆ.</p>.<p>ವಿಷಯ ತಿಳಿದ ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದವರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>