‘ಗದಗಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಗದಗದಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ವ್ಯಾಗನಾರ್ ಕಾರು ನಾರಾಯಣಪುರ ಗ್ರಾಮಕ್ಕಿಂತ ಸ್ವಲ್ಪ ಹಿಂದೆ ಮುಖಾಮುಖಿ ಡಿಕ್ಕಿ ಹೊಡೆದಿವೆ. ಈ ಸಂದರ್ಭದಲ್ಲಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ’ ಎಂದು ಗದಗ ಗ್ರಾಮಾಂತರ ಠಾಣೆ ಪಿಎಸ್ಐ ಅಜಿತ್ ಹೊಸಮನಿ ತಿಳಿಸಿದ್ದಾರೆ.