ಅಮಾವಾಸ್ಯೆ ಅಂಗವಾಗಿ ಹುಬ್ಬಳ್ಳಿಯ ದಂಪತಿ ಬಾಗಲಕೋಟೆ ಮಾರ್ಗವಾಗಿ ದೇವಸ್ಥಾನಕ್ಕೆ ಹೊರಟಿದ್ದರು. ಬಾಗಲಕೋಟೆ ಕಡೆಯಿಂದ ಅತಿವೇಗವಾಗಿ ಬಂದ ಕಾರು, ಬೈಕ್ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ದೀಪಾ ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಪ್ರಾಣ ಉಳಿಯಲಿಲ್ಲ.