ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ನಿಂದನೆ: ಕ್ರಮಕ್ಕೆ ಆಗ್ರಹಿಸಿ ಮನವಿ

Published 24 ಆಗಸ್ಟ್ 2023, 17:12 IST
Last Updated 24 ಆಗಸ್ಟ್ 2023, 17:12 IST
ಅಕ್ಷರ ಗಾತ್ರ

ಶಿರಹಟ್ಟಿ: ಭೂ ಒಡೆತನ ಯೋಜನೆ ಅಡಿಯಲ್ಲಿ ಜಮೀನು ಪಡೆಯಲು ಎಸ್ಸಿ, ಎಸ್ಟಿ ಕಾರ್ಪೋರೇಷನ್‌ಗೆ ಅರ್ಜಿ ಸಲ್ಲಿಸಲು ಪಿಟಿಸಿಎಲ್ ಸೀಟ್ ಕೇಳಲು ಹೋದಾಗ ಜಾತಿ ನಿಂದನೆ ಮಾಡಿ ಅವಮಾನಿಸಲಾಗಿದೆ. ತಕ್ಷಣ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ತಾಲ್ಲೂಕಿನ ಛಬ್ಬಿ ಗ್ರಾಮದ ಗ್ರಾಮಸ್ಥರು ತಹಶೀಲ್ದಾರ್ ಅನಿಲ ಬಡಿಗೇರ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡ ಜಾನು ಲಮಾಣಿ ಮಾತನಾಡಿ, ಸರ್ಕಾರ ಎಸ್ಸಿ, ಎಸ್ಟಿ ಸಮುದಾಯದವರ ಅಭಿವೃದ್ದಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡುತ್ತಿದೆ. ಜಮೀನು ಇಲ್ಲದ ಜನರಿಗೆ ಎಸ್ಸಿ, ಎಸ್ಟಿ ಕಾರ್ಪೋರೇಷನ್ ವತಿಯಿಂದ ಭೂಮಿ ಮಂಜೂರು ಮಾಡುತ್ತಿದ್ದು, ಅರ್ಜಿ ಸಲ್ಲಿಸಲು ಪಿಟಿಸಿಎಲ್ ಪೈಲ್ ಕುರಿತು ಮಾಹಿತಿ ಕೇಳಲು ಹೋದಾಗ ಅವಮಾನಿಸಲಾಗಿದೆ. ಎಸ್ಸಿ ಮೀಸಲು ಕ್ಷೇತ್ರದಲ್ಲಿಯೇ ನಮಗೆ ರಕ್ಷಣೆ ಇಲ್ಲದಂತಾಗಿದ್ದು, ಸರ್ಕಾರದ ಸೌಲಭ್ಯ ಪಡೆಯಲು ಪೂರಕ ದಾಖಲೆ ಜೋಡಣೆ ಮಾಡಿಕೊಳ್ಳಲು ಮಾಹಿತಿ ಕೇಳಲು ಹೋಗಿದ್ದೇವು. ಅಲ್ಲಿನ ಪ್ರಬಾರಿ ಕಂದಾಯ ನಿರೀಕ್ಷಕ ಬಿ.ಪಿ. ಗೊರೇಖಾನ ಅವರು ನಮಗೆ ಯಾವುದೇ ಮಾಹಿತಿ ನೀಡದೆ ಹಿಯಾಳಿಸಿದ್ದಾರೆ’ ಎಂದು ದೂರಿದರು.

ಪ್ರಬಾರಿ ಕಂದಾಯ ನಿರೀಕ್ಷಕರ ನಡೆ ಕಚೇರಿಗೆ ಬರುವ ಸಾರ್ವಜನಿಕರಿಗೆ ಬೇಸರ ತರಿಸುತ್ತಿದ್ದು, ಕೂಡಲೇ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಕೈಗೋಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರವೀಣಗೌಡ ಪಾಟೀಲ, ತಿಪ್ಪಣ್ಣ ಲಮಾಣಿ, ರಾಜೀವರಡ್ಡಿ ಬೊಮ್ಮನಕಟ್ಟಿ, ರಮೇಶ ಲಮಾಣಿ, ಕೃಷ್ಣಾ ಲಮಾಣಿ, ಕೃಷ್ಣಾ ಪವಾರ, ಸೋಮು ಲಮಾಣಿ, ಸಂತೋಷ ಲಮಾಣಿ, ನಿಂಗಪ್ಪ ಲಮಾಣಿ, ರಾಮಣ್ಣ ಲಮಾಣಿ, ಹೇಮಂತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT