<p><strong>ಲಕ್ಷ್ಮೇಶ್ವರ</strong>: ರಾಜ್ಯದಲ್ಲಿ ಜಾತಿ ಜನಗಣತಿಯನ್ನು ಎಲ್ಲೋ ಕುಳಿತು ಸಿದ್ಧಪಡಿಸಲಾಗಿದೆ. ಕಾರಣ, ಮತ್ತೊಮ್ಮೆ ಜಾತಿ ಗಣತಿಯನ್ನು ನಡೆಸಬೇಕು ಎಂದು ತಾಲ್ಲೂಕಿನ ಶಿಗ್ಲಿ ಗ್ರಾಮದ ಧಾರ್ಮಿಕ ಮುಖಂಡ ವೀರಣ್ಣ ಹಾಲಪ್ಪ ಪವಾಡದ ಆಗ್ರಹಿಸಿದರು.</p>.<p>ಈ ಕುರಿತು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು ‘ಹಳೇ ವರದಿ ಮುಂದುವರಿಸಿದರೆ ಸಮಾಜದಲ್ಲಿ ಜಾತಿ ಸಂಘರ್ಷಕ್ಕೆ ಕಾರಣವಾಗುತ್ತದೆ. ವೀರಶೈವ ಲಿಂಗಾಯತರು, ಒಕ್ಕಲಿಗರು ಈಗಾಗಲೇ ಆಕ್ಷೇಪ ವ್ಯಕ್ತಪಡಿಸಿದ್ದು ಜಾತಿ ಗಣತಿ ಸರಿಯಾದ ಕ್ರಮದಲ್ಲಿ ಆಗಿಲ್ಲ ಎಂಬ ಕೂಗು ಕೇಳಿ ಬರುತ್ತಿವೆ’ ಎಂದರು.</p>.<p>‘ಕಳೆದ 10 ವರ್ಷಗಳಿಂದ ಈ ವಿಚಾರವಾಗಿ ಬೇಕಾದಷ್ಟು ಚರ್ಚೆಗಳು ನಡೆಯುತ್ತಿದ್ದು, ಈಗಾಗಲೇ ವರದಿ ಸರ್ಕಾರಕ್ಕೆ ಸೇರಿದೆ. ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ಹೇಳಿದ್ದಾರೆ. ಈ ನಿರ್ಧಾರಕ್ಕೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಹಾಗೂ ಒಕ್ಕಲಿಗರ ಸಂಘವು ವಿರೋಧ ವ್ಯಕ್ತಪಡಿಸಿವೆ’ ಎಂದರು.</p>.<p>‘ಜಾತಿ ಗಣತಿಯು ಅವೈಜ್ಞಾನಿಕವಾಗಿದ್ದು, ಅಧಿಕಾರಿಗಳು ಮಾಡಿದ ಪೂರ್ವ ನಿಯೋಜಿತ ವರದಿ ಎಂಬ ಭಾವನೆ ಎಲ್ಲರಲ್ಲಿ ಬೆಳೆದು ಬಂದಿದೆ. ಇದರಿಂದ ಜಾತಿ ಸಮಘರ್ಷಕ್ಕೆ ಕಾರಣವಾಗಬಹುದು. ಅದಕ್ಕಾಗಿ ಮರು ಸಮೀಕ್ಷೆ ನಡೆಸುವುದು ಒಳ್ಳೆಯದು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ</strong>: ರಾಜ್ಯದಲ್ಲಿ ಜಾತಿ ಜನಗಣತಿಯನ್ನು ಎಲ್ಲೋ ಕುಳಿತು ಸಿದ್ಧಪಡಿಸಲಾಗಿದೆ. ಕಾರಣ, ಮತ್ತೊಮ್ಮೆ ಜಾತಿ ಗಣತಿಯನ್ನು ನಡೆಸಬೇಕು ಎಂದು ತಾಲ್ಲೂಕಿನ ಶಿಗ್ಲಿ ಗ್ರಾಮದ ಧಾರ್ಮಿಕ ಮುಖಂಡ ವೀರಣ್ಣ ಹಾಲಪ್ಪ ಪವಾಡದ ಆಗ್ರಹಿಸಿದರು.</p>.<p>ಈ ಕುರಿತು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು ‘ಹಳೇ ವರದಿ ಮುಂದುವರಿಸಿದರೆ ಸಮಾಜದಲ್ಲಿ ಜಾತಿ ಸಂಘರ್ಷಕ್ಕೆ ಕಾರಣವಾಗುತ್ತದೆ. ವೀರಶೈವ ಲಿಂಗಾಯತರು, ಒಕ್ಕಲಿಗರು ಈಗಾಗಲೇ ಆಕ್ಷೇಪ ವ್ಯಕ್ತಪಡಿಸಿದ್ದು ಜಾತಿ ಗಣತಿ ಸರಿಯಾದ ಕ್ರಮದಲ್ಲಿ ಆಗಿಲ್ಲ ಎಂಬ ಕೂಗು ಕೇಳಿ ಬರುತ್ತಿವೆ’ ಎಂದರು.</p>.<p>‘ಕಳೆದ 10 ವರ್ಷಗಳಿಂದ ಈ ವಿಚಾರವಾಗಿ ಬೇಕಾದಷ್ಟು ಚರ್ಚೆಗಳು ನಡೆಯುತ್ತಿದ್ದು, ಈಗಾಗಲೇ ವರದಿ ಸರ್ಕಾರಕ್ಕೆ ಸೇರಿದೆ. ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ಹೇಳಿದ್ದಾರೆ. ಈ ನಿರ್ಧಾರಕ್ಕೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಹಾಗೂ ಒಕ್ಕಲಿಗರ ಸಂಘವು ವಿರೋಧ ವ್ಯಕ್ತಪಡಿಸಿವೆ’ ಎಂದರು.</p>.<p>‘ಜಾತಿ ಗಣತಿಯು ಅವೈಜ್ಞಾನಿಕವಾಗಿದ್ದು, ಅಧಿಕಾರಿಗಳು ಮಾಡಿದ ಪೂರ್ವ ನಿಯೋಜಿತ ವರದಿ ಎಂಬ ಭಾವನೆ ಎಲ್ಲರಲ್ಲಿ ಬೆಳೆದು ಬಂದಿದೆ. ಇದರಿಂದ ಜಾತಿ ಸಮಘರ್ಷಕ್ಕೆ ಕಾರಣವಾಗಬಹುದು. ಅದಕ್ಕಾಗಿ ಮರು ಸಮೀಕ್ಷೆ ನಡೆಸುವುದು ಒಳ್ಳೆಯದು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>