<p><strong>ಗದಗ:</strong> ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಿದ್ಧಪಡಿಸಿ, ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಜಾತಿಗಣತಿ ವರದಿ ಅವೈಜ್ಞಾನಿಕವಾಗಿದೆ ಎಂದು ನೇಕಾರ ಸಮುದಾಯ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಸೋಮಶೇಖರ ಹೇಳಿದರು.</p>.<p>‘ರಾಜ್ಯದಲ್ಲಿರುವ ನೇಕಾರ ಸಮುದಾಯಗಳ ಜನಸಂಖ್ಯೆಯನ್ನು ದಾಖಲಿಸುವಲ್ಲಿ ಆಯೋಗವು ಕೈಗೊಂಡಿರುವ ಕ್ರಮವು ಸರಿಯಾಗಿಲ್ಲ’ ಎಂದು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿನ ಅಂಕಿ-ಅಂಶಗಳು ಸಮುದಾಯಕ್ಕೆ ದೊಡ್ಡ ಆಘಾತ ನೀಡಿದೆ. ಜಾತಿಗಣತಿಯಲ್ಲಿ ಕೇವಲ 9 ಲಕ್ಷ ಜನಸಂಖ್ಯೆ ನಮೂದಿಸಲಾಗಿದೆ. ನೇಕಾರ ಸಮುದಾಯ ಒಕ್ಕೂಟದಿಂದ ನಾವೇ ಸಮೀಕ್ಷೆ ಮಾಡಲು ನಿರ್ಧರಿಸಿದ್ದೇವೆ. ನೇಕಾರರ ಜಾತಿಗಣತಿಗಾಗಿ ಆ್ಯಪ್ ಸಿದ್ದಪಡಿಸಿದ್ದೇವೆ’ ಎಂದರು.</p>.<p>ರಾಜ್ಯದ ನೇಕಾರ ಸಮುದಾಯವು ವರದಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನೇಕಾರ ಸಮುದಾಯಗಳ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು ಐದಾರು ಸಭೆಗಳನ್ನು ನಡೆಸಿ ಮರು ಸಮೀಕ್ಷೆಗಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ತಿಳಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ ಗದ್ದಿ ಮಾತನಾಡಿ, ‘ಹಿಂದುಳಿದ ವರ್ಗಕ್ಕೆ ಸೇರಿದ ನೇಕಾರ ಸಮುದಾಯದ ನಿಖರ ಜನಸಂಖ್ಯೆಯನ್ನು ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಆ್ಯಪ್ ಅನ್ನು ಸಿದ್ದಪಡಿಸಿದೆ. ಈ ಆ್ಯಪ್ ಮೂಲಕ ರಾಜ್ಯದಲ್ಲಿರುವ ನೇಕಾರರು ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರಮಾಹಿತಿ ಒದಗಿಸಲು ಅನುಕೂಲ ಕಲ್ಪಿಸಲಾಗಿದೆ’ ಎಂದರು.</p>.<p>‘ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟವು ರಾಜ್ಯದಾದ್ಯಂತ ಜಿಲ್ಲಾವಾರು ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸಮುದಾಯದವರ ಜಾತಿಗಣತಿ ಸಮೀಕ್ಷೆಯನ್ನು ನಡೆಸಲಿದ್ದು, ಸ್ಥಳೀಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮೂಲಕ ನೇಕಾರರನ್ನು ಸಂಪರ್ಕಿಸಿ, ಕುಟುಂಬ ಸದಸ್ಯರ ಅಂಕಿ ಅಂಶಗಳನ್ನು ಸಂಗ್ರಹಿಸಿ ಆ್ಯಪ್ನಲ್ಲಿ ದಾಖಲಿಸಲಾಗುವುದು’ ಎಂದರು.</p>.<p>ದಶರಥ ಕೊಳ್ಳಿ, ಮೈಲಾರಪ್ಪ, ಶ್ರೀನಿವಾಸ ಹುಬ್ಬಳ್ಳಿ, ತಾರಾಮತಿ, ರಾಮಕೃಷ್ಣಪ್ಪ ದೇವರಕೊಂಡಿ, ನಾಮದೇವ ಸೂರೆ, ನಿಂಗಪ್ಪ ಚೇಗೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಿದ್ಧಪಡಿಸಿ, ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಜಾತಿಗಣತಿ ವರದಿ ಅವೈಜ್ಞಾನಿಕವಾಗಿದೆ ಎಂದು ನೇಕಾರ ಸಮುದಾಯ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಸೋಮಶೇಖರ ಹೇಳಿದರು.</p>.<p>‘ರಾಜ್ಯದಲ್ಲಿರುವ ನೇಕಾರ ಸಮುದಾಯಗಳ ಜನಸಂಖ್ಯೆಯನ್ನು ದಾಖಲಿಸುವಲ್ಲಿ ಆಯೋಗವು ಕೈಗೊಂಡಿರುವ ಕ್ರಮವು ಸರಿಯಾಗಿಲ್ಲ’ ಎಂದು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿನ ಅಂಕಿ-ಅಂಶಗಳು ಸಮುದಾಯಕ್ಕೆ ದೊಡ್ಡ ಆಘಾತ ನೀಡಿದೆ. ಜಾತಿಗಣತಿಯಲ್ಲಿ ಕೇವಲ 9 ಲಕ್ಷ ಜನಸಂಖ್ಯೆ ನಮೂದಿಸಲಾಗಿದೆ. ನೇಕಾರ ಸಮುದಾಯ ಒಕ್ಕೂಟದಿಂದ ನಾವೇ ಸಮೀಕ್ಷೆ ಮಾಡಲು ನಿರ್ಧರಿಸಿದ್ದೇವೆ. ನೇಕಾರರ ಜಾತಿಗಣತಿಗಾಗಿ ಆ್ಯಪ್ ಸಿದ್ದಪಡಿಸಿದ್ದೇವೆ’ ಎಂದರು.</p>.<p>ರಾಜ್ಯದ ನೇಕಾರ ಸಮುದಾಯವು ವರದಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನೇಕಾರ ಸಮುದಾಯಗಳ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು ಐದಾರು ಸಭೆಗಳನ್ನು ನಡೆಸಿ ಮರು ಸಮೀಕ್ಷೆಗಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ತಿಳಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ ಗದ್ದಿ ಮಾತನಾಡಿ, ‘ಹಿಂದುಳಿದ ವರ್ಗಕ್ಕೆ ಸೇರಿದ ನೇಕಾರ ಸಮುದಾಯದ ನಿಖರ ಜನಸಂಖ್ಯೆಯನ್ನು ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಆ್ಯಪ್ ಅನ್ನು ಸಿದ್ದಪಡಿಸಿದೆ. ಈ ಆ್ಯಪ್ ಮೂಲಕ ರಾಜ್ಯದಲ್ಲಿರುವ ನೇಕಾರರು ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರಮಾಹಿತಿ ಒದಗಿಸಲು ಅನುಕೂಲ ಕಲ್ಪಿಸಲಾಗಿದೆ’ ಎಂದರು.</p>.<p>‘ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟವು ರಾಜ್ಯದಾದ್ಯಂತ ಜಿಲ್ಲಾವಾರು ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸಮುದಾಯದವರ ಜಾತಿಗಣತಿ ಸಮೀಕ್ಷೆಯನ್ನು ನಡೆಸಲಿದ್ದು, ಸ್ಥಳೀಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮೂಲಕ ನೇಕಾರರನ್ನು ಸಂಪರ್ಕಿಸಿ, ಕುಟುಂಬ ಸದಸ್ಯರ ಅಂಕಿ ಅಂಶಗಳನ್ನು ಸಂಗ್ರಹಿಸಿ ಆ್ಯಪ್ನಲ್ಲಿ ದಾಖಲಿಸಲಾಗುವುದು’ ಎಂದರು.</p>.<p>ದಶರಥ ಕೊಳ್ಳಿ, ಮೈಲಾರಪ್ಪ, ಶ್ರೀನಿವಾಸ ಹುಬ್ಬಳ್ಳಿ, ತಾರಾಮತಿ, ರಾಮಕೃಷ್ಣಪ್ಪ ದೇವರಕೊಂಡಿ, ನಾಮದೇವ ಸೂರೆ, ನಿಂಗಪ್ಪ ಚೇಗೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>