<p><strong>ನರೇಗಲ್</strong>: ಪಟ್ಟಣದ ರೈತ ಅಂದಪ್ಪ ಶಂಕ್ರಪ್ಪ ಹಡಪದ ಎಂಬುವರ ಎರಡು ಎಮ್ಮೆಗಳು ಮೊಳಕೆಯೊಡೆದ ಹೆಸರು ಹಾಗೂ ಕುಳೆ ತಿಂದು ಸಾವನ್ನಪಿರುವ ಘಟನೆ ಬುಧವಾರ ಸಂಭವಿಸಿದೆ.</p>.<p>‘ರೈತರು ರಾಶಿ ಮಾಡಿದ ನಂತರ ಉಳಿದ ಹೆಸರು ಕಾಳುಗಳನ್ನು ಎಲ್ಲೆಂದರಲ್ಲಿ ಬಿಟ್ಟಿದ್ದು, ಮಳೆಯಿಂದಾಗಿ ಮೊಳಕೆಯೊಡೆದ ಹೆಸರು ಬೆಳೆ ತಿಂದು ಎಮ್ಮೆಗಳು ಮೃತಪಟ್ಟಿವೆ. ಇದರಿಂದ ಅಪಾರ ನಷ್ಟ ಸಂಭವಿಸಿದೆ’ ಎಂದು ಅಂದಪ್ಪ ಹಡಪದ ಅವಲತ್ತುಕೊಂಡರು.</p>.<p>ದ್ವಿದಳ ಧಾನ್ಯದ ಬೆಳೆಗಳನ್ನು ರಾಶಿ ಮಾಡಿ ಹೊಲದಲ್ಲಿಯೇ ಬಿಟ್ಟರೆ ಚಿಗುರುವ ಕುಳೆಯಲ್ಲಿ ವಿಷಕಾರಿ ಅನಿಲ ಪ್ರಮಾಣ ಹೆಚ್ಚಾಗಿ ಇರುತ್ತದೆ. ಇದನ್ನು ತಿಂದಾಗ ಶ್ವಾಸಕೋಶಕ್ಕೆ ತೊಂದರೆಯಾಗಿ ದನ ಕರುಗಳು ಮೃತಪಡುತ್ತವೆ. ಆದ್ದರಿಂದ ರೈತರು ಹಾಗೂ ಕುರುಗಾಹಿಗಳು ಜಾಗೃರಾಗಿರಬೇಕು. ಈ ಬಾರಿ ನರೇಗಲ್ ಭಾಗದಲ್ಲಿ 40ಕ್ಕೂ ಹೆಚ್ಚು ಕುರಿಗಳು, 2 ದನಗಳು ಸಾನ್ನಪ್ಪಿರುವ ಘಟನೆಗಳು ನಡೆದಿವೆ’ ಎಂದು ಪಶು ವೈದ್ಯಾಧಿಕಾರಿ ಲಿಂಗಯ್ಯ ಗೌರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್</strong>: ಪಟ್ಟಣದ ರೈತ ಅಂದಪ್ಪ ಶಂಕ್ರಪ್ಪ ಹಡಪದ ಎಂಬುವರ ಎರಡು ಎಮ್ಮೆಗಳು ಮೊಳಕೆಯೊಡೆದ ಹೆಸರು ಹಾಗೂ ಕುಳೆ ತಿಂದು ಸಾವನ್ನಪಿರುವ ಘಟನೆ ಬುಧವಾರ ಸಂಭವಿಸಿದೆ.</p>.<p>‘ರೈತರು ರಾಶಿ ಮಾಡಿದ ನಂತರ ಉಳಿದ ಹೆಸರು ಕಾಳುಗಳನ್ನು ಎಲ್ಲೆಂದರಲ್ಲಿ ಬಿಟ್ಟಿದ್ದು, ಮಳೆಯಿಂದಾಗಿ ಮೊಳಕೆಯೊಡೆದ ಹೆಸರು ಬೆಳೆ ತಿಂದು ಎಮ್ಮೆಗಳು ಮೃತಪಟ್ಟಿವೆ. ಇದರಿಂದ ಅಪಾರ ನಷ್ಟ ಸಂಭವಿಸಿದೆ’ ಎಂದು ಅಂದಪ್ಪ ಹಡಪದ ಅವಲತ್ತುಕೊಂಡರು.</p>.<p>ದ್ವಿದಳ ಧಾನ್ಯದ ಬೆಳೆಗಳನ್ನು ರಾಶಿ ಮಾಡಿ ಹೊಲದಲ್ಲಿಯೇ ಬಿಟ್ಟರೆ ಚಿಗುರುವ ಕುಳೆಯಲ್ಲಿ ವಿಷಕಾರಿ ಅನಿಲ ಪ್ರಮಾಣ ಹೆಚ್ಚಾಗಿ ಇರುತ್ತದೆ. ಇದನ್ನು ತಿಂದಾಗ ಶ್ವಾಸಕೋಶಕ್ಕೆ ತೊಂದರೆಯಾಗಿ ದನ ಕರುಗಳು ಮೃತಪಡುತ್ತವೆ. ಆದ್ದರಿಂದ ರೈತರು ಹಾಗೂ ಕುರುಗಾಹಿಗಳು ಜಾಗೃರಾಗಿರಬೇಕು. ಈ ಬಾರಿ ನರೇಗಲ್ ಭಾಗದಲ್ಲಿ 40ಕ್ಕೂ ಹೆಚ್ಚು ಕುರಿಗಳು, 2 ದನಗಳು ಸಾನ್ನಪ್ಪಿರುವ ಘಟನೆಗಳು ನಡೆದಿವೆ’ ಎಂದು ಪಶು ವೈದ್ಯಾಧಿಕಾರಿ ಲಿಂಗಯ್ಯ ಗೌರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>