ಪಶು ಚಿಕಿತ್ಸಕ ಮಂಜುನಾಥ ಅಮರಾಪುರ ಮಾತನಾಡಿ, ‘ಪ್ರಸ್ತುತ ದಿನಗಳಲ್ಲಿ ಹೈನುಗಾರಿಕೆಗೆ ಹೆಚ್ಚು ಒತ್ತು ಸಿಗುತ್ತಿದೆ. ಹಾಲು ಉತ್ಪಾದನೆ, ಬರಡು ರಾಸುವಿಗೆ ಚಿಕಿತ್ಸೆ ಸೇರಿದಂತೆ ಜಾನುರುಗಳ ಆರೈಕೆ ಬಗ್ಗೆ ರೈತರು ನಿರ್ಲಕ್ಷ್ಯ ತೋರಬಾರದು. ಹತ್ತಿರದ ಪಶು ಆಸ್ಪತ್ರೆಯಲ್ಲಿ ಕಾಲಕಾಲಕ್ಕೆ ಚಿಕಿತ್ಸೆ ಕೊಡಿಸಬೇಕು’ ಎಂದು ಹೇಳಿದರು. ಪಶು ಚಿಕಿತ್ಸಾ ವಿಧಾನಗಳು, ಇಲಾಖೆಯ ಯೋಜನೆಗಳ ಕುರಿತು ತಿಳಿಸಿದರು.