ಸಾರ್ವಜನಿಕ ಸ್ವಾತಂತ್ರ್ಯೋತ್ಸವದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿ, ‘ಮಳೆ ಚೆನ್ನಾಗಿ ಸುರಿದಿದ್ದರಿಂದ ಎಲ್ಲ ರೈತರೂ ಏಕಕಾಲಕ್ಕೆ ಬಿತ್ತನೆಯಲ್ಲಿ ತೊಡಗಿಸಿಕೊಂಡರು. ಇದೇ ಸಮಯಕ್ಕೆ ಬೆಳೆಗಳಿಗೆ ಹಳದಿ ರೋಗ ಕಾಣಿಸಿಕೊಂಡಿತು. ಹಾಗಾಗಿ, ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಾಯಿತು. ಈ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸಚಿವರ ಜತೆಗೆ ಮಾತನಾಡಿದ್ದೇನೆ. ಮುಂದೆ ಯೂರಿಯಾ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುವುದು. ರೈತರಿಗೆ ತೊಂದರೆ ಆಗುವ ರೀತಿಯಲ್ಲಿ ನಮ್ಮ ಅಧಿಕಾರಿ ವರ್ಗ, ಆಡಳಿತ ವರ್ಗ ಯಾವತ್ತಿಗೂ ವರ್ತಿಸುವುದಿಲ್ಲ’ ಎಂದು ಹೇಳಿದರು.