<p><strong>ಗದಗ:</strong> ‘ಕೋವಿಡ್-19ನಿಂದ ತತ್ತರಿಸಿರುವ ಸಣ್ಣ ಕೈಗಾರಿಕೆಗಳಿಗೆ ಕಾಯಕಲ್ಪ ಹಾಗೂ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ತುರ್ತಾಗಿ ಸ್ಪಂದಿಸಬೇಕು’ ಎಂದು ಎಫ್ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ.ಸುಂದರ್ ಹೇಳಿದರು.</p>.<p>ನಗರದ ಜಗದ್ಗುರು ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯಿಂದ ಆಯೋಜಿಸಿದ್ದ ಶ್ರೇಷ್ಠ ವರ್ತಕ ಹಾಗೂ ಶ್ರೇಷ್ಠ ಉದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲಾ ವಾಣಿಜ್ಯೋದ್ಯಮ ಸಂಘ 19 ವರ್ಷಗಳಿಂದ ಉದ್ಯಮಿಗಳಿಗೆ ಪ್ರಶಸ್ತಿ ನೀಡಿ, ಅವರನ್ನು ಪ್ರೋತ್ಸಾಹಿಸುತ್ತಿರುವ ಕಾರ್ಯ ಮಾದರಿಯಾಗಿದೆ. ಎಫ್ಕೆಸಿಸಿಐ ಉದ್ಯಮದಾರರಿಗೆ ಸಲಹೆ ನೀಡಲಿದೆ’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಮುಂಡರಗಿ ಶ್ರೀಗಳು ಮಾತನಾಡಿ, ‘ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕು. ವ್ಯಾಪಾರವನ್ನು ಪ್ರಾಮಾಣಿಕತೆ ಹಾಗೂ ಪರಿಶುದ್ಧ ಮನಸ್ಸಿನಿಂದ ಮಾಡಿದಾಗ ಮಾತ್ರ ಉದ್ಯಮದಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಆನಂದ ಎಲ್.ಪೋತ್ನಿಸ್ ಮಾತನಾಡಿ, ‘ಪ್ರಶಸ್ತಿಗಳು ಉದ್ಯಮ ಸ್ಥಾಪನೆ ಹಾಗೂ ವ್ಯವಹಾರದಲ್ಲಿ ಮತ್ತಷ್ಟು ಪ್ರಾಮಾಣಿಕತೆ ಹಾಗೂ ಕೈಗಾರಿಕೆ ಆರಂಭಕ್ಕೆ ಉತ್ತೇಜನ ನೀಡಲು ನೆರವಾಗುತ್ತವೆ. ಗದಗ ಚೇಂಬರ್ ಆಫ್ ಕಾಮರ್ಸ್ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ’ ಎಂದರು.</p>.<p>ಗದಗ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ರಾಜೂಗೌಡ ಕೆಂಚನಗೌಡ್ರ ವೇದಿಕೆಯಲ್ಲಿ ಇದ್ದರು.</p>.<p>ಗದುಗಿನ ಶೇಖಣ್ಣ ಫ. ಗದ್ದಿಕೇರಿ ಹಾಗೂ ದತ್ತುದಾಸ ಪುಣೇಕರ ಅವರಿಗೆ ಜೀವಮಾನ ಸಾಧನೆಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸದಾಶಿವಯ್ಯ ಮದರಿಮಠ ಅವರಿಗೆ ಚೇಂಬರ್ ಆಫ್ ಕಾಮರ್ಸ್ನಿಂದ ವಿಶೇಷ ಸನ್ಮಾನ ನಡೆಯಿತು.</p>.<p>ಶರಣಬಸಪ್ಪ ಕುರಡಗಿ ಸ್ವಾಗತಿಸಿದರು. ಚಂದ್ರು ಬಾಳಿ ಹಳ್ಳಿಮಠ ಮತ್ತು ಆರ್.ಬಿ. ದಾನಪ್ಪಗೌಡ್ರ ಅವರು ಪ್ರಶಸ್ತಿ ಪುರಸ್ಕೃತರನ್ನು, ಅಶೋಕ ನಿಲೂಗಲ್ ಅವರು ಅತಿಥಿಗಳನ್ನು ಪರಿಚಯಿಸಿದರು. ವೀರೇಶ ಕೂಗು ನಿರೂಪಿಸಿದರು. ಶರಣಬಸಪ್ಪ ಗುಡಿಮನಿ ವಂದಿಸಿದರು.</p>.<p>ಕಾರ್ಯಕ್ರಮದಲ್ಲಿ ಆರ್.ಬಿ. ದಾನಪ್ಪಗೌಡ್ರ, ಈಶಣ್ಣ ಮುನವಳ್ಳಿ, ಮಧುಸೂದನ ಪುಣೇಕರ, ಸೋಮನಾಥ ಕೆ. ಜಾಲಿ, ಚೇಂಬರ್ ಆಫ್ ಕಾಮರ್ಸ್ನ ಮಾಜಿ ಅಧ್ಯಕ್ಷ ಎಚ್.ವಿ.ಶಾನುಭೋಗರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಕೋವಿಡ್-19ನಿಂದ ತತ್ತರಿಸಿರುವ ಸಣ್ಣ ಕೈಗಾರಿಕೆಗಳಿಗೆ ಕಾಯಕಲ್ಪ ಹಾಗೂ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ತುರ್ತಾಗಿ ಸ್ಪಂದಿಸಬೇಕು’ ಎಂದು ಎಫ್ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ.ಸುಂದರ್ ಹೇಳಿದರು.</p>.<p>ನಗರದ ಜಗದ್ಗುರು ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯಿಂದ ಆಯೋಜಿಸಿದ್ದ ಶ್ರೇಷ್ಠ ವರ್ತಕ ಹಾಗೂ ಶ್ರೇಷ್ಠ ಉದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲಾ ವಾಣಿಜ್ಯೋದ್ಯಮ ಸಂಘ 19 ವರ್ಷಗಳಿಂದ ಉದ್ಯಮಿಗಳಿಗೆ ಪ್ರಶಸ್ತಿ ನೀಡಿ, ಅವರನ್ನು ಪ್ರೋತ್ಸಾಹಿಸುತ್ತಿರುವ ಕಾರ್ಯ ಮಾದರಿಯಾಗಿದೆ. ಎಫ್ಕೆಸಿಸಿಐ ಉದ್ಯಮದಾರರಿಗೆ ಸಲಹೆ ನೀಡಲಿದೆ’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಮುಂಡರಗಿ ಶ್ರೀಗಳು ಮಾತನಾಡಿ, ‘ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕು. ವ್ಯಾಪಾರವನ್ನು ಪ್ರಾಮಾಣಿಕತೆ ಹಾಗೂ ಪರಿಶುದ್ಧ ಮನಸ್ಸಿನಿಂದ ಮಾಡಿದಾಗ ಮಾತ್ರ ಉದ್ಯಮದಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಆನಂದ ಎಲ್.ಪೋತ್ನಿಸ್ ಮಾತನಾಡಿ, ‘ಪ್ರಶಸ್ತಿಗಳು ಉದ್ಯಮ ಸ್ಥಾಪನೆ ಹಾಗೂ ವ್ಯವಹಾರದಲ್ಲಿ ಮತ್ತಷ್ಟು ಪ್ರಾಮಾಣಿಕತೆ ಹಾಗೂ ಕೈಗಾರಿಕೆ ಆರಂಭಕ್ಕೆ ಉತ್ತೇಜನ ನೀಡಲು ನೆರವಾಗುತ್ತವೆ. ಗದಗ ಚೇಂಬರ್ ಆಫ್ ಕಾಮರ್ಸ್ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ’ ಎಂದರು.</p>.<p>ಗದಗ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ರಾಜೂಗೌಡ ಕೆಂಚನಗೌಡ್ರ ವೇದಿಕೆಯಲ್ಲಿ ಇದ್ದರು.</p>.<p>ಗದುಗಿನ ಶೇಖಣ್ಣ ಫ. ಗದ್ದಿಕೇರಿ ಹಾಗೂ ದತ್ತುದಾಸ ಪುಣೇಕರ ಅವರಿಗೆ ಜೀವಮಾನ ಸಾಧನೆಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸದಾಶಿವಯ್ಯ ಮದರಿಮಠ ಅವರಿಗೆ ಚೇಂಬರ್ ಆಫ್ ಕಾಮರ್ಸ್ನಿಂದ ವಿಶೇಷ ಸನ್ಮಾನ ನಡೆಯಿತು.</p>.<p>ಶರಣಬಸಪ್ಪ ಕುರಡಗಿ ಸ್ವಾಗತಿಸಿದರು. ಚಂದ್ರು ಬಾಳಿ ಹಳ್ಳಿಮಠ ಮತ್ತು ಆರ್.ಬಿ. ದಾನಪ್ಪಗೌಡ್ರ ಅವರು ಪ್ರಶಸ್ತಿ ಪುರಸ್ಕೃತರನ್ನು, ಅಶೋಕ ನಿಲೂಗಲ್ ಅವರು ಅತಿಥಿಗಳನ್ನು ಪರಿಚಯಿಸಿದರು. ವೀರೇಶ ಕೂಗು ನಿರೂಪಿಸಿದರು. ಶರಣಬಸಪ್ಪ ಗುಡಿಮನಿ ವಂದಿಸಿದರು.</p>.<p>ಕಾರ್ಯಕ್ರಮದಲ್ಲಿ ಆರ್.ಬಿ. ದಾನಪ್ಪಗೌಡ್ರ, ಈಶಣ್ಣ ಮುನವಳ್ಳಿ, ಮಧುಸೂದನ ಪುಣೇಕರ, ಸೋಮನಾಥ ಕೆ. ಜಾಲಿ, ಚೇಂಬರ್ ಆಫ್ ಕಾಮರ್ಸ್ನ ಮಾಜಿ ಅಧ್ಯಕ್ಷ ಎಚ್.ವಿ.ಶಾನುಭೋಗರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>