<p><strong>ಮುಂಡರಗಿ: ‘</strong>ಶಾಸಕ ಡಾ.ಚಂದ್ರು ಲಮಾಣಿ ಅವರು ಈ ಭಾಗದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಜನಮನ್ನಣೆ ಗಳಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಅವರು ಮಾಡಿದ ಜನಸೇವೆ ಶ್ಲಾಘನೀಯ’ ಎಂದು ಚಿತ್ರನಟಿ ಪ್ರೇಮಾ ಹರ್ಷವ್ಯಕ್ತಪಡಿಸಿದರು.</p>.<p>ಚಂದ್ರು ಲಮಾಣಿ ಅಭಿಮಾನಿ ಬಳಗವು ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ಹಮ್ಮಿಕೊಂಡಿದ್ದ ಶಾಸಕರ ಜನ್ಮದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಾನ್ನಿಧ್ಯ ವಹಿಸಿದ್ದ ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ‘ಕಿರಿಯ ವಯಸ್ಸಿನಲ್ಲಿ ಶಾಸಕರಾಗಿ ಆಯ್ಕೆಯಾಗಿರುವ ಚಂದ್ರು ಲಮಾಣಿ ಅವರು ಮುಂದೆಯೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾಗೊಳಿಸಲಿ’ ಎಂದು ಆಶಿಸಿದರು.</p>.<p>ಶಾಸಕ ಚಂದ್ರು ಲಮಾಣಿ ಮಾತನಾಡಿ, ‘ಈ ಭಾಗದ ರೈತರ ಜಮೀನುಗಳಿಗೆ ನೀರೊದಗಿಸುವುದು ಸೇರಿದಂತೆ ಕ್ಷೇತ್ರದಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಕ್ಷೇತ್ರದ ಜನತೆಯ ಪ್ರೀತಿ ಹಾಗೂ ಗೌರವ ಸದಾ ನನ್ನ ಮೇಲಿರಲಿ’ ಎಂದು ಮನವಿ ಮಾಡಿಕೊಂಡರು.</p>.<p>ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಅಧ್ಯಕ್ಷತೆ ವಹಿಸಿದ್ದರು. ಕಲಕೇರಿ– ವಿರುಪಾಪುರದ ಮುದುಕೇಶ್ವರ ಶಿವಾಚಾರ್ಯ ಸ್ವಾಮೀಜಿ, ಬಿಜೆಪಿ ಜಿಲ್ಲಾ ಘಟಕದ ಅದ್ಯಕ್ಷ ರಾಜು ಕುರಡಗಿ ಮಾತನಾಡಿದರು.</p>.<p>ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಶಿರಹಟ್ಟಿ ಮತಕ್ಷೇತ್ರದ ಎಲ್ಲ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತಸಲಾಯಿತು. ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಕೈಗೊಳ್ಳಲಾಗಿತ್ತು.</p>.<p>ಯುವ ಮುಖಂಡ ಮಂಜುನಾಥ ಮುಧೋಳ, ಪುರಸಭೆ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ, ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ, ಮುಖಂಡರಾದ ಕೆ.ವಿ. ಹಂಚಿನಾಳ, ರವಿ ಉಪ್ಪಿನಬೆಟಗೇರಿ, ರವಿ ದಂಡಿನ, ಎಸ್.ವಿ. ಪಾಟೀಲ, ಕೊಟ್ರೇಶ ಅಂಗಡಿ, ಸರೋಜಾ ಲಮಾಣಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಲಿಂಗರಾಜಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ: ‘</strong>ಶಾಸಕ ಡಾ.ಚಂದ್ರು ಲಮಾಣಿ ಅವರು ಈ ಭಾಗದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಜನಮನ್ನಣೆ ಗಳಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಅವರು ಮಾಡಿದ ಜನಸೇವೆ ಶ್ಲಾಘನೀಯ’ ಎಂದು ಚಿತ್ರನಟಿ ಪ್ರೇಮಾ ಹರ್ಷವ್ಯಕ್ತಪಡಿಸಿದರು.</p>.<p>ಚಂದ್ರು ಲಮಾಣಿ ಅಭಿಮಾನಿ ಬಳಗವು ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ಹಮ್ಮಿಕೊಂಡಿದ್ದ ಶಾಸಕರ ಜನ್ಮದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಾನ್ನಿಧ್ಯ ವಹಿಸಿದ್ದ ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ‘ಕಿರಿಯ ವಯಸ್ಸಿನಲ್ಲಿ ಶಾಸಕರಾಗಿ ಆಯ್ಕೆಯಾಗಿರುವ ಚಂದ್ರು ಲಮಾಣಿ ಅವರು ಮುಂದೆಯೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾಗೊಳಿಸಲಿ’ ಎಂದು ಆಶಿಸಿದರು.</p>.<p>ಶಾಸಕ ಚಂದ್ರು ಲಮಾಣಿ ಮಾತನಾಡಿ, ‘ಈ ಭಾಗದ ರೈತರ ಜಮೀನುಗಳಿಗೆ ನೀರೊದಗಿಸುವುದು ಸೇರಿದಂತೆ ಕ್ಷೇತ್ರದಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಕ್ಷೇತ್ರದ ಜನತೆಯ ಪ್ರೀತಿ ಹಾಗೂ ಗೌರವ ಸದಾ ನನ್ನ ಮೇಲಿರಲಿ’ ಎಂದು ಮನವಿ ಮಾಡಿಕೊಂಡರು.</p>.<p>ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಅಧ್ಯಕ್ಷತೆ ವಹಿಸಿದ್ದರು. ಕಲಕೇರಿ– ವಿರುಪಾಪುರದ ಮುದುಕೇಶ್ವರ ಶಿವಾಚಾರ್ಯ ಸ್ವಾಮೀಜಿ, ಬಿಜೆಪಿ ಜಿಲ್ಲಾ ಘಟಕದ ಅದ್ಯಕ್ಷ ರಾಜು ಕುರಡಗಿ ಮಾತನಾಡಿದರು.</p>.<p>ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಶಿರಹಟ್ಟಿ ಮತಕ್ಷೇತ್ರದ ಎಲ್ಲ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತಸಲಾಯಿತು. ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಕೈಗೊಳ್ಳಲಾಗಿತ್ತು.</p>.<p>ಯುವ ಮುಖಂಡ ಮಂಜುನಾಥ ಮುಧೋಳ, ಪುರಸಭೆ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ, ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ, ಮುಖಂಡರಾದ ಕೆ.ವಿ. ಹಂಚಿನಾಳ, ರವಿ ಉಪ್ಪಿನಬೆಟಗೇರಿ, ರವಿ ದಂಡಿನ, ಎಸ್.ವಿ. ಪಾಟೀಲ, ಕೊಟ್ರೇಶ ಅಂಗಡಿ, ಸರೋಜಾ ಲಮಾಣಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಲಿಂಗರಾಜಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>