ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚರಂಡಿ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸೂಚನೆ

ಮುಂಗಾರು ಮಳೆ ಪೂರ್ವ ಸಿದ್ಧತೆ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ ವೈಶಾಲಿ
Published 25 ಮೇ 2024, 14:21 IST
Last Updated 25 ಮೇ 2024, 14:21 IST
ಅಕ್ಷರ ಗಾತ್ರ

ಗದಗ: ಮುಂಗಾರು ಮಳೆ ಪೂರ್ವ ಸಿದ್ಧತೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಅವರು ಶನಿವಾರ ಸ್ವಚ್ಛತಾ ಕಾಮಗಾರಿ ವೀಕ್ಷಿಸಿ, ಸಲಹೆ ಸೂಚನೆ ನೀಡಿದರು.

ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿನ ಚರಂಡಿಗಳು ಮತ್ತು ರಾಜಕಾಲುವೆಗಳಲ್ಲಿನ ಹೂಳು ಮತ್ತು ಮುಳ್ಳು ಕಂಟಿಗಳನ್ನು ತೆಗೆಯಬೇಕು. ಹಿಟಾಚಿ ಮತ್ತು ಜೆಸಿಬಿ ವಾಹನಗಳ ಮುಖಾಂತರ ಶೀಘ್ರವಾಗಿ ಚರಂಡಿಗಳನ್ನು ಸ್ವಚ್ಛಗೊಳಿಸಿ, ಮಳೆನೀರು ಸರಾಗವಾಗಿ ಹರಿದು ಹೋಗಲು ಅನುವು ಮಾಡಿಕೊಡಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರು ಕಸ, ಮುಸುರೆ ಹಾಗೂ ಕಟ್ಟಡದ ತ್ಯಾಜ್ಯಗಳನ್ನು ಚರಂಡಿಗಳಿಗೆ ಎಸೆಯದಂತೆ ಜಾಗೃತಿ ಮೂಡಿಸಬೇಕು. ಚರಂಡಿಯಿಂದ ತೆಗೆದ ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು. 

ಗದಗ-ಬೆಟಗೇರಿ ನಗರದಲ್ಲಿ ಸಂಚರಿಸಿ ಮಾನ್ವಿ ರಾಜನಾಲಾ, ಹೊಸ ಕೋರ್ಟ್ ಹತ್ತಿರದ ರಾಜನಾಲಾ, ಬೆಟಗೇರಿಯ ಜರ್ಮನ್ ಆಸ್ಪತ್ರೆ ಬಳಿ ಇರುವ ರಾಜನಾಲಾ ಮತ್ತು ಹುಯಿಲಗೋಳ ಸೇತುವೆ ಸಮೀಪದ ರಾಜನಾಲಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಂಡಿವಡ್ಡರ, ಪರಿಸರ ಎಂಜಿನಿಯರ್‌ ಆನಂದ ಬದಿ, ನಗರಸಭೆ ಆರೋಗ್ಯ ನಿರೀಕ್ಷಕರು, ದಫೇದಾರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT