<p><strong>ಶಿರಹಟ್ಟಿ</strong>: 18 ವರ್ಷದೊಳಗಿನ ಕಿಶೋರಾವಸ್ಥೆ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಮತ್ತು 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ ಎಂದು ತಹಶೀಲ್ದಾರ್ ಕೆ. ರಾಘವೇಂದ್ರ ರಾವ್ ಹೇಳಿದರು.</p>.<p>ಪಟ್ಟಣದ ಮಾರುಕಟ್ಟೆಯಲ್ಲಿ ಸೋಮವಾರ ಕಾರ್ಮಿಕ ಸೊಸೈಟಿ, ಕಾರ್ಮಿಕ ಅಧಿಕಾರಿಗಳ ಕಚೇರಿ, ತಾಲ್ಲೂಕು ಕಚೇರಿಗಳ ಸಹಯೋಗದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕುರಿತು ನಡೆಸಲಾದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಾರುಕಟ್ಟೆಯಲ್ಲಿನ ಪ್ರತಿ ಅಂಗಡಿಗಳಿಗೆ ಭೇಟಿ ನೀಡಿ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿದೆಯೇ ಎಂಬ ಬಗ್ಗೆ ಪರಿಶೀಲನೆ ಮಾಡಲಾಯಿತು. ಈ ಕುರಿತು ಮಾತನಾಡಿದ ತಹಶೀಲ್ದಾರ್ ಕೆ.ರಾಘವೇಂದ್ರ ರಾವ್, ಬಾಲ್ಯಾವಸ್ಥೆ ಹಾಗೂ ‘ಕಿಶೋರಾವಸ್ಥೆಯ ಕಾರ್ಮಿಕರ ನೇಮಕ ಮಾಡಿಕೊಂಡರೆ ಮಾಲೀಕರು ₹ 50 ಸಾವಿರದವರೆಗೆ ದಂಡ ಅಥವಾ ಎರಡು ವರ್ಷಗಳವರೆಗೆ ಜೈಲುವಾಸದ ಶಿಕ್ಷೆಗೆ ಒಳಪಡುತ್ತಾರೆ. ತಪ್ಪಿತಸ್ಥ ಮಾಲಿಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್ಐಆರ್ ಕೂಡ ದಾಖಲಾಗುತ್ತದೆ. ಕೆಲಸಕ್ಕೆ ಸೇರಿಸಿದ ಪಾಲಕರ ಮೇಲೆಯೂ ಸಹ ಮೊಕದ್ದಮೆ ದಾಖಲಾಗುತ್ತದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಮಾತನಾಡಿ, ‘ಕಾನೂನು ಪ್ರಕಾರ 14 ವರ್ಷದೊಳಗಿನ ಮಕ್ಕಳಿಂದ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಬಾಲ ಕಾರ್ಮಿಕ ಪದ್ಧತಿಯನ್ನು ನಾಗರಿಕರು ಖಂಡಿಸಿ ಅವರನ್ನು ಮುಖ್ಯವಾಹಿನಿಗೆ ತರಬೇಕು. ನಾನಾ ಕಾರಣಗಳಿಗೆ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ತಳ್ಳುತ್ತಿದ್ದಾರೆ. ಈ ಬಗ್ಗೆ ಅವರಲ್ಲಿ ಜಾಗೃತಿ ಮೂಡಿಸಬೇಕು. ಬಾಲ ಕಾರ್ಮಿಕ ಪದ್ಧತಿಗೆ ಕುಟುಂಬದ ಆರ್ಥಿಕ ಹಾಗೂ ಸಾಮಾಜಿಕ ಕಾರಣಗಳೇ ಮುಖ್ಯವಾಗಿದೆ. ಕುಟುಂಬದ ಬಡತನದಿಂದಾಗಿ ಮಕ್ಕಳನ್ನು ಶಾಲೆಗೆ ಕಳುಹಿಸದೇ ದುಡಿಮೆಗೆ ಕಳುಹಿಸುತ್ತಾರೆ. ಅದನ್ನು ಬಿಟ್ಟು ಸರ್ಕಾರದಿಂದ ದೊರೆಯುವ ಸೌಲಭ್ಯ ಬಳಸಿಕೊಂಡು ಮಕ್ಕಳನ್ನು ಶಾಲೆಗೆ ಕಳುಹಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಕೆಲಸಕ್ಕೆ ನೇಮಿಸಿಕೊಳ್ಳುವ ಮಾಲೀಕರು ಪ್ರತಿ ಮಗುವಿಗೆ ₹ 20 ಸಾವಿರಗಳಂತೆ ಪರಿಹಾರವಾಗಿ ಸಹ ಜಿಲ್ಲಾ ಬಾಲಕಾರ್ಮಿಕ ಪುನರ್ವಸತಿ ಕಲ್ಯಾಣ ನಿಧಿಗೆ ಪಾವತಿಸಬೇಕಾಗುತ್ತದೆ. ಬಾಲ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ. ಈ ಹಿನ್ನೆಲೆಯಲ್ಲಿ ಬಾಲ ಕಾರ್ಮಿಕರು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ 1098 ಅಥವಾ ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್ಯ ಇಲಾಖೆ, ಸಿಡಿಪಿಒ ಕಚೇರಿ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಕೃಷಿ ಇಲಾಖೆಗಳನ್ನು ಕೂಡ ಸಂಪರ್ಕಿಸಬಹುದು ಎಂದರು. ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಹಟ್ಟಿ</strong>: 18 ವರ್ಷದೊಳಗಿನ ಕಿಶೋರಾವಸ್ಥೆ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಮತ್ತು 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ ಎಂದು ತಹಶೀಲ್ದಾರ್ ಕೆ. ರಾಘವೇಂದ್ರ ರಾವ್ ಹೇಳಿದರು.</p>.<p>ಪಟ್ಟಣದ ಮಾರುಕಟ್ಟೆಯಲ್ಲಿ ಸೋಮವಾರ ಕಾರ್ಮಿಕ ಸೊಸೈಟಿ, ಕಾರ್ಮಿಕ ಅಧಿಕಾರಿಗಳ ಕಚೇರಿ, ತಾಲ್ಲೂಕು ಕಚೇರಿಗಳ ಸಹಯೋಗದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕುರಿತು ನಡೆಸಲಾದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಾರುಕಟ್ಟೆಯಲ್ಲಿನ ಪ್ರತಿ ಅಂಗಡಿಗಳಿಗೆ ಭೇಟಿ ನೀಡಿ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿದೆಯೇ ಎಂಬ ಬಗ್ಗೆ ಪರಿಶೀಲನೆ ಮಾಡಲಾಯಿತು. ಈ ಕುರಿತು ಮಾತನಾಡಿದ ತಹಶೀಲ್ದಾರ್ ಕೆ.ರಾಘವೇಂದ್ರ ರಾವ್, ಬಾಲ್ಯಾವಸ್ಥೆ ಹಾಗೂ ‘ಕಿಶೋರಾವಸ್ಥೆಯ ಕಾರ್ಮಿಕರ ನೇಮಕ ಮಾಡಿಕೊಂಡರೆ ಮಾಲೀಕರು ₹ 50 ಸಾವಿರದವರೆಗೆ ದಂಡ ಅಥವಾ ಎರಡು ವರ್ಷಗಳವರೆಗೆ ಜೈಲುವಾಸದ ಶಿಕ್ಷೆಗೆ ಒಳಪಡುತ್ತಾರೆ. ತಪ್ಪಿತಸ್ಥ ಮಾಲಿಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್ಐಆರ್ ಕೂಡ ದಾಖಲಾಗುತ್ತದೆ. ಕೆಲಸಕ್ಕೆ ಸೇರಿಸಿದ ಪಾಲಕರ ಮೇಲೆಯೂ ಸಹ ಮೊಕದ್ದಮೆ ದಾಖಲಾಗುತ್ತದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಮಾತನಾಡಿ, ‘ಕಾನೂನು ಪ್ರಕಾರ 14 ವರ್ಷದೊಳಗಿನ ಮಕ್ಕಳಿಂದ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಬಾಲ ಕಾರ್ಮಿಕ ಪದ್ಧತಿಯನ್ನು ನಾಗರಿಕರು ಖಂಡಿಸಿ ಅವರನ್ನು ಮುಖ್ಯವಾಹಿನಿಗೆ ತರಬೇಕು. ನಾನಾ ಕಾರಣಗಳಿಗೆ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ತಳ್ಳುತ್ತಿದ್ದಾರೆ. ಈ ಬಗ್ಗೆ ಅವರಲ್ಲಿ ಜಾಗೃತಿ ಮೂಡಿಸಬೇಕು. ಬಾಲ ಕಾರ್ಮಿಕ ಪದ್ಧತಿಗೆ ಕುಟುಂಬದ ಆರ್ಥಿಕ ಹಾಗೂ ಸಾಮಾಜಿಕ ಕಾರಣಗಳೇ ಮುಖ್ಯವಾಗಿದೆ. ಕುಟುಂಬದ ಬಡತನದಿಂದಾಗಿ ಮಕ್ಕಳನ್ನು ಶಾಲೆಗೆ ಕಳುಹಿಸದೇ ದುಡಿಮೆಗೆ ಕಳುಹಿಸುತ್ತಾರೆ. ಅದನ್ನು ಬಿಟ್ಟು ಸರ್ಕಾರದಿಂದ ದೊರೆಯುವ ಸೌಲಭ್ಯ ಬಳಸಿಕೊಂಡು ಮಕ್ಕಳನ್ನು ಶಾಲೆಗೆ ಕಳುಹಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಕೆಲಸಕ್ಕೆ ನೇಮಿಸಿಕೊಳ್ಳುವ ಮಾಲೀಕರು ಪ್ರತಿ ಮಗುವಿಗೆ ₹ 20 ಸಾವಿರಗಳಂತೆ ಪರಿಹಾರವಾಗಿ ಸಹ ಜಿಲ್ಲಾ ಬಾಲಕಾರ್ಮಿಕ ಪುನರ್ವಸತಿ ಕಲ್ಯಾಣ ನಿಧಿಗೆ ಪಾವತಿಸಬೇಕಾಗುತ್ತದೆ. ಬಾಲ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ. ಈ ಹಿನ್ನೆಲೆಯಲ್ಲಿ ಬಾಲ ಕಾರ್ಮಿಕರು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ 1098 ಅಥವಾ ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್ಯ ಇಲಾಖೆ, ಸಿಡಿಪಿಒ ಕಚೇರಿ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಕೃಷಿ ಇಲಾಖೆಗಳನ್ನು ಕೂಡ ಸಂಪರ್ಕಿಸಬಹುದು ಎಂದರು. ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>