<p><strong>ಗದಗ</strong>: ‘ಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರು ಹಿಂದುಳಿದ ವರ್ಗದವರೇ. ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಹಿಂದುಳಿದ ವರ್ಗಗಳ ಮಕ್ಕಳೇ ಬಲಿಯಾಗಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಪ್ರಶ್ನಿಸಿದರು.</p><p>ಗದಗ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ, ಸ್ಮರಣ ಸಂಚಿಕೆ ಬಿಡುಗಡೆ ಮತ್ತು ಸಂಘಜೀವಿ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಸಮರ್ಪಣೆ ಮತ್ತು ರಾಜ್ಯಮಟ್ಟದ ಕನಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ದೇಶದಲ್ಲಿ ಆಳವಾಗಿ ಬೇರುಬಿಟ್ಟ ಜಾತಿ ವ್ಯವಸ್ಥೆ ಇದೆ. ಜಾತಿ ವ್ಯವಸ್ಥೆ ನಿರ್ಮೂಲನೆವರೆಗೆ ಸಮಾನತೆ ಸಾಧ್ಯವಿಲ್ಲ. ಈ ವ್ಯವಸ್ಥೆಯನ್ನು ಜೀವಂತ<br>ವಾಗಿಡುವ ಸಂಚು ನಡೆದಿದೆ’<br>ಎಂದರು.</p><p><strong>ಬಾನು ವಿರೋಧಿಗಳಿಗೆ ತಕ್ಕ ಪಾಠ:</strong> ‘ನಾಡ ಹಬ್ಬ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದವರಿಗೆ ಸುಪ್ರೀಂಕೋರ್ಟ್ ಸರಿಯಾಗಿ ಪಾಠ ಮಾಡಿದೆ ಎಂದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರು ಹಿಂದುಳಿದ ವರ್ಗದವರೇ. ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಹಿಂದುಳಿದ ವರ್ಗಗಳ ಮಕ್ಕಳೇ ಬಲಿಯಾಗಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಪ್ರಶ್ನಿಸಿದರು.</p><p>ಗದಗ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ, ಸ್ಮರಣ ಸಂಚಿಕೆ ಬಿಡುಗಡೆ ಮತ್ತು ಸಂಘಜೀವಿ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಸಮರ್ಪಣೆ ಮತ್ತು ರಾಜ್ಯಮಟ್ಟದ ಕನಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ದೇಶದಲ್ಲಿ ಆಳವಾಗಿ ಬೇರುಬಿಟ್ಟ ಜಾತಿ ವ್ಯವಸ್ಥೆ ಇದೆ. ಜಾತಿ ವ್ಯವಸ್ಥೆ ನಿರ್ಮೂಲನೆವರೆಗೆ ಸಮಾನತೆ ಸಾಧ್ಯವಿಲ್ಲ. ಈ ವ್ಯವಸ್ಥೆಯನ್ನು ಜೀವಂತ<br>ವಾಗಿಡುವ ಸಂಚು ನಡೆದಿದೆ’<br>ಎಂದರು.</p><p><strong>ಬಾನು ವಿರೋಧಿಗಳಿಗೆ ತಕ್ಕ ಪಾಠ:</strong> ‘ನಾಡ ಹಬ್ಬ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದವರಿಗೆ ಸುಪ್ರೀಂಕೋರ್ಟ್ ಸರಿಯಾಗಿ ಪಾಠ ಮಾಡಿದೆ ಎಂದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>