ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿರುವ ಅವರು, ‘ಕೊರೊನಾ ನಿರ್ವಹಣೆಯಲ್ಲಿ ಪ್ರತಿಯೊಂದು ಪರಿಕರದ ಖರೀದಿಯಲ್ಲೂ ಭ್ರಷ್ಟಾಚಾರದ ದೂರುಗಳು ವ್ಯಾಪಕವಾಗಿವೆ. ಇಂತಹ ಸಂದರ್ಭದಲ್ಲಿ ಸಮಿತಿ ತನ್ನ ಕರ್ತವ್ಯದಿಂದ ವಿಮುಖವಾಗಲು ಸಾಧ್ಯವಿಲ್ಲ. ಸಭೆ ನಡೆಸಬೇಕು, ಅಧಿಕಾರಿಗಳಿಂದ ವಿವರಣೆ ಪಡೆಯಬೇಕು, ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು’ ಎಂದು ಒತ್ತಾಯಿಸಿದ್ದಾರೆ.