<p><strong>ಗದಗ: </strong>‘ಯಡಿಯೂರಪ್ಪ ರಾಜೀನಾಮೆ ಕೊಡುವುದರಿಂದ ಅಥವಾ ಇನ್ನೊಬ್ಬ ಹೊಸ ಮುಖ್ಯಮಂತ್ರಿ ಬರುವುದರಿಂದ ರಾಜ್ಯಕ್ಕೇನು ಒಳ್ಳೆಯದಾಗುವುದಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು.</p>.<p>ಸೋಮವಾರ ಗದುಗಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ಕಂಡಂತಹ ಒಬ್ಬ ಭ್ರಷ್ಟ ಮುಖ್ಯಮಂತ್ರಿ. ಬರುವ ಮತ್ತೊಬ್ಬ ಸಿಎಂ ಕೂಡ ಭ್ರಷ್ಟರಾಗಿಯೇ ಇರುತ್ತಾರೆ. ಬಿಜೆಪಿಯೇ ಭ್ರಷ್ಟ ಪಕ್ಷ. ಬಿಜೆಪಿ ತೊಲಗದೇ ಹೋದರೆ ಈ ರಾಜ್ಯಕ್ಕೆ ಮುಕ್ತಿ ಇಲ್ಲ. ಸರ್ಕಾರದ ಭ್ರಷ್ಟಾಚಾರ ಹಾಗೂ ನಿಷ್ಕ್ರಿಯತೆಯನ್ನು ಬಯಲು ಮಾಡುವುದೇ ನಮ್ಮ ಗುರಿ’ ಎಂದು ಅವರು ಗುಡುಗಿದರು.</p>.<p>‘ಸ್ವಾಮೀಜಿಗಳು ರಾಜಕಾರಣ ಮಾಡದೇ ಧಾರ್ಮಿಕ ಕ್ಷೇತ್ರದಲ್ಲಿ ಮುನ್ನಡೆಯುವುದು ಒಳ್ಳೆಯದು. ವಲಸೆ ಹೋದ ಶಾಸಕರಿಗೆ ಜನರೇ ಪಾಠ ಕಲಿಸಲಿದ್ದಾರೆ’ ಎಂದು ಹೇಳಿದರು.</p>.<p>‘ಜನರು ಅಭಿಮಾನದಿಂದ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿದರೆ ಅದಕ್ಕೆ ನಾನೇನು ಮಾಡಲು ಸಾಧ್ಯ? ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಮ್ಮ ಪಕ್ಷದಲ್ಲಿ ಹೈಕಮಾಂಡ್ ಹಾಗೂ ನೂತನ ಶಾಸಕರು ನಿರ್ಧರಿಸುತ್ತಾರೆ’ ಎಂದು ಹೇಳಿ ಮುನ್ನಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>‘ಯಡಿಯೂರಪ್ಪ ರಾಜೀನಾಮೆ ಕೊಡುವುದರಿಂದ ಅಥವಾ ಇನ್ನೊಬ್ಬ ಹೊಸ ಮುಖ್ಯಮಂತ್ರಿ ಬರುವುದರಿಂದ ರಾಜ್ಯಕ್ಕೇನು ಒಳ್ಳೆಯದಾಗುವುದಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು.</p>.<p>ಸೋಮವಾರ ಗದುಗಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ಕಂಡಂತಹ ಒಬ್ಬ ಭ್ರಷ್ಟ ಮುಖ್ಯಮಂತ್ರಿ. ಬರುವ ಮತ್ತೊಬ್ಬ ಸಿಎಂ ಕೂಡ ಭ್ರಷ್ಟರಾಗಿಯೇ ಇರುತ್ತಾರೆ. ಬಿಜೆಪಿಯೇ ಭ್ರಷ್ಟ ಪಕ್ಷ. ಬಿಜೆಪಿ ತೊಲಗದೇ ಹೋದರೆ ಈ ರಾಜ್ಯಕ್ಕೆ ಮುಕ್ತಿ ಇಲ್ಲ. ಸರ್ಕಾರದ ಭ್ರಷ್ಟಾಚಾರ ಹಾಗೂ ನಿಷ್ಕ್ರಿಯತೆಯನ್ನು ಬಯಲು ಮಾಡುವುದೇ ನಮ್ಮ ಗುರಿ’ ಎಂದು ಅವರು ಗುಡುಗಿದರು.</p>.<p>‘ಸ್ವಾಮೀಜಿಗಳು ರಾಜಕಾರಣ ಮಾಡದೇ ಧಾರ್ಮಿಕ ಕ್ಷೇತ್ರದಲ್ಲಿ ಮುನ್ನಡೆಯುವುದು ಒಳ್ಳೆಯದು. ವಲಸೆ ಹೋದ ಶಾಸಕರಿಗೆ ಜನರೇ ಪಾಠ ಕಲಿಸಲಿದ್ದಾರೆ’ ಎಂದು ಹೇಳಿದರು.</p>.<p>‘ಜನರು ಅಭಿಮಾನದಿಂದ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿದರೆ ಅದಕ್ಕೆ ನಾನೇನು ಮಾಡಲು ಸಾಧ್ಯ? ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಮ್ಮ ಪಕ್ಷದಲ್ಲಿ ಹೈಕಮಾಂಡ್ ಹಾಗೂ ನೂತನ ಶಾಸಕರು ನಿರ್ಧರಿಸುತ್ತಾರೆ’ ಎಂದು ಹೇಳಿ ಮುನ್ನಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>