ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಕಾರ್ಮಿಕರಿಗೆ ಯಾವುದೇ ಸೌಲಭ್ಯ ನೀಡಿಲ್ಲ. ಬಡವರಿಗೆ ಇಂದಿಗೂ ಸೂರು ಕೊಡಲು ಸಾಧ್ಯವಾಗಿಲ್ಲ. ಆದರೆ, ರಾಷ್ಟ್ರ ನಾಯಕಿ ಮಾಯಾವತಿ ಅವರು ಹಲವಾರು ವರ್ಷಗಳ ಹಿಂದೆಯೇ ಇದನ್ನು ಮಾಡಿ ತೋರಿಸಿದ್ದಾರೆ. ಮೋದಿ ಅವರು ಮತ್ತೆ 10 ಕೋಟಿ ಮನೆಗಳನ್ನು ಕೊಡುತ್ತೇವೆ ಎಂದು ಹೇಳಿರುವುದು ಹಾಸ್ಯಾಸ್ಪದ’ ಎಂದು ಲೇವಡಿ ಮಾಡಿದರು.