<p><strong>ಗದಗ:</strong>‘ಜಿಲ್ಲೆಯಾದ್ಯಂತ ಕೊರೊನಾ ಸೋಂಕು ಹರಡದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮನೆಯಲ್ಲಿ ಮತ್ತು ಆಸ್ಪತ್ರೆ ಸೇರಿ ಸದ್ಯ ಒಟ್ಟು 81 ಜನರು ತಾತ್ಕಾಲಿಕ ನಿಗಾ ವ್ಯವಸ್ಥೆಯಲ್ಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.</p>.<p>ಇವರಲ್ಲಿ ಈಗಾಗಲೇ 5 ಮಂದಿ 28 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. ಸದ್ಯ ಮನೆಯಲ್ಲಿ 74 ಮಂದಿ ಪ್ರತ್ಯೇಕ ನಿಗಾ ವ್ಯವಸ್ಥೆಯಲ್ಲಿದ್ದಾರೆ. ಆಸ್ಪತ್ರೆಗೆ ಇಬ್ಬರು ದಾಖಲಾಗಿದ್ದು, ಅವರ ಮೇಲೆ ನಿಗಾ ವಹಿಸಲಾಗುತ್ತಿದೆ.</p>.<p>ಒಟ್ಟು 12 ಮಂದಿಯ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ 9 ಮಂದಿಗೆ ಕೊರೊನಾ ಸೋಂಕು ಇಲ್ಲ ಎಂದು ವರದಿ ದೃಢಪಡಿಸಿದೆ. ಇನ್ನು ಮೂರು ವರದಿಗಳು ಬರಬೇಕಿವೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್-19 ವೈರಸ್ ಖಚಿತ ಪ್ರಕರಣಗಳು ಯಾವುದೂ ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಎರಡು ದಿನಗಳ ಹಿಂದೆ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಜಿಮ್ಸ್) ದಾಖಲಾಗಿದ್ದ ಲಂಡನ್ ಪ್ರವಾಸದಿಂದ ಮರಳಿ ಬಂದ ಕುಟುಂಬದ ಮೂರು ವರ್ಷದ ಮಗುವಿಗೆ ಸೋಂಕು ತಗುಲಿಲ್ಲ ಎನ್ನುವುದು ಪರೀಕ್ಷೆಯಿಂದ ದೃಢಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong>‘ಜಿಲ್ಲೆಯಾದ್ಯಂತ ಕೊರೊನಾ ಸೋಂಕು ಹರಡದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮನೆಯಲ್ಲಿ ಮತ್ತು ಆಸ್ಪತ್ರೆ ಸೇರಿ ಸದ್ಯ ಒಟ್ಟು 81 ಜನರು ತಾತ್ಕಾಲಿಕ ನಿಗಾ ವ್ಯವಸ್ಥೆಯಲ್ಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.</p>.<p>ಇವರಲ್ಲಿ ಈಗಾಗಲೇ 5 ಮಂದಿ 28 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. ಸದ್ಯ ಮನೆಯಲ್ಲಿ 74 ಮಂದಿ ಪ್ರತ್ಯೇಕ ನಿಗಾ ವ್ಯವಸ್ಥೆಯಲ್ಲಿದ್ದಾರೆ. ಆಸ್ಪತ್ರೆಗೆ ಇಬ್ಬರು ದಾಖಲಾಗಿದ್ದು, ಅವರ ಮೇಲೆ ನಿಗಾ ವಹಿಸಲಾಗುತ್ತಿದೆ.</p>.<p>ಒಟ್ಟು 12 ಮಂದಿಯ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ 9 ಮಂದಿಗೆ ಕೊರೊನಾ ಸೋಂಕು ಇಲ್ಲ ಎಂದು ವರದಿ ದೃಢಪಡಿಸಿದೆ. ಇನ್ನು ಮೂರು ವರದಿಗಳು ಬರಬೇಕಿವೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್-19 ವೈರಸ್ ಖಚಿತ ಪ್ರಕರಣಗಳು ಯಾವುದೂ ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಎರಡು ದಿನಗಳ ಹಿಂದೆ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಜಿಮ್ಸ್) ದಾಖಲಾಗಿದ್ದ ಲಂಡನ್ ಪ್ರವಾಸದಿಂದ ಮರಳಿ ಬಂದ ಕುಟುಂಬದ ಮೂರು ವರ್ಷದ ಮಗುವಿಗೆ ಸೋಂಕು ತಗುಲಿಲ್ಲ ಎನ್ನುವುದು ಪರೀಕ್ಷೆಯಿಂದ ದೃಢಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>