ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಗದಗ ಜಿಲ್ಲೆಗೆ ಕಳಪೆ ಗುಣಮಟ್ಟದ ವೆಂಟಿಲೇಟರ್ಗಳನ್ನು ನೀಡಲಾಗಿದೆ. ಅವುಗಳಿಗೆ ಕನೆಕ್ಟರ್ ಇಲ್ಲ, ಆಕ್ಸಿಜನ್ ಸೆನ್ಸರ್ ಇಲ್ಲ. ಇದರಿಂದಾಗಿ ವೆಂಟಿಲೇಟರ್ಗಳು ಬಂದು ಒಂದು ವಾರ ಆದರೂ ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ತೀವ್ರ ಉಸಿರಾಟದ ಸಮಸ್ಯೆ ಇರುವ ರೋಗಿಗಳು ವೆಂಟಿಲೇಟರ್ ಸೌಲಭ್ಯ ಸಿಗದೇ ಸಾವನ್ನಪ್ಪುತ್ತಿದ್ದಾರೆ. ಈ ಸಾವುಗಳಿಗೆಲ್ಲ ಕೇಂದ್ರ ಸರ್ಕಾರವೇ ನೇರ ಹೊಣೆ’ ಎಂದು ಅವರು ಗಂಭೀರ ಆರೋಪ ಮಾಡಿದರು.