ಲಕ್ಷ್ಮೇಶ್ವರ: ಪಟ್ಟಣದಲ್ಲಿ ತರಕಾರಿ ಮಾರಾಟ ಮಾಡುವವರೆಲ್ಲರೂ ಕಡ್ಡಾಯವಾಗಿ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂಬ ವದಂತಿ ಹಬ್ಬಿದ್ದರಿಂದ ಪರೀಕ್ಷೆ ಮಾಡಿಸಿಕೊಳ್ಳಲು ಬೆದರಿದ ಇಲ್ಲಿನ ಭಾನು ಮಾರ್ಕೆಟ್ನ ತರಕಾರಿ ವ್ಯಾಪಾರಸ್ಥರು ಗುರುವಾರ ಇಡೀ ದಿನ ತಮ್ಮ ಅಂಗಡಿಗಳನ್ನು ಬಂದ್ ಮಾಡಿದ್ದರು. ಇದರಿಂದಾಗಿ ತರಕಾರಿ ಖರೀದಿಗೆ ಬಂದಿದ್ದ ಸಾರ್ವಜನಿಕರು ತೊಂದರೆ ಅನುಭವಿಸಬೇಕಾಯಿತು.