ಬಿಡುಗಡೆಗೆ ಮುನ್ನ ಈ ಮೂವರ ಗಂಟಲು ದ್ರವದ ಮಾದರಿಯನ್ನು ಮತ್ತೊಮ್ಮೆ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಮತ್ತು ಧಾರವಾಡದ ಡಿಮ್ಹಾನ್ಸ್ನಲ್ಲಿ ಪರೀಕ್ಷೆಗೆ ಒಳಪಡಿಸಿ, ‘ನೆಗಟಿವ್’ ಆಗಿರುವುದನ್ನು ಖಚಿತಪಡಿಸಿ ಬಿಡುಗಡೆ ಮಾಡಲಾಗಿದೆ’ ಎಂದು ಜಿಮ್ಸ್ ನಿರ್ದೇಶಕ ಪಿ.ಎಸ್ ಭೂಸರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಂದೇ ಪ್ರದೇಶದ ನಿವಾಸಿಗಳು
ಸೋಂಕು ಗುಣಮುಖರಾಗಿ ಮನೆಗೆ ಮರಳಿರುವ ಪಿ–304, ಪಿ–370 ಮತ್ತು ಪಿ–396 ಇವರು ಮೂವರೂ ಗದುಗಿನ ರಂಗನವಾಡ ಪ್ರದೇಶದ ನಿವಾಸಿಗಳು. ಜಿಲ್ಲಾಡಳಿತವು ಈಗಾಗಲೇ ಈ ಪ್ರದೇಶವನ್ನು ಕಂಟೈನ್ಮೆಂಟ್ ಪ್ರದೇಶ ಎಂದು ಘೋಷಿಸಿ, ಅಲ್ಲಿನ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಿದೆ.
ಕೊರೊನಾ ಸೋಂಕಿತರೆಲ್ಲರೂ ಗುಣಮುಖರಾದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವೈದ್ಯರಿಗೆ, ಆರೋಗ್ಯ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ್ದಾರೆ.