ಪಟ್ಟಣ ಪಂಚಾಯ್ತಿ ವತಿಯಿಂದ ಕೋವಿಡ್ ಜಾಗೃತಿ ನಡೆಯಿತು. ಬ್ಯಾಂಕ್ ಆವರಣ, ಸರ್ಕಾರಿ, ಖಾಸಗಿ ಆಸ್ಪತ್ರೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪೌರಕಾರ್ಮಿಕರಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ ನಡೆಯಿತು. ಈ ಕುರಿತು ಪ.ಪಂ ಮುಖ್ಯಾಧಿಕಾರಿ ಎಂ.ಎಸ್.ಬೆಂತೂರ ಮಾತನಾಡಿ, ಸಾರ್ವಜನಿಕರು ಹೊರಗೆ ಬಂದಾಗ ಮಾಸ್ಕ್ ಧರಿಸಬೇಕು, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಂಡು ಸೋಂಕು ಹರಡದಂತೆ ಎಚ್ಚರ ವಹಿಸಿ ಎಂದರು.