ಸೋಂಕಿನಿಂದ ಮೃತಪಟ್ಟ ವ್ಯಕ್ತಿ ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮಕ್ಕೆ ಸೇರಿದವರು. ಈಗಾಗಲೇ ಜಿಲ್ಲಾಡಳಿತ ಗ್ರಾಮವನ್ನು ಕಂಟೈನ್ಮೆಂಟ್ ಪ್ರದೇಶವಾಗಿ ಘೋಷಿಸಿ, ಕಟ್ಟೆಚ್ಚರ ವಹಿಸಿದೆ. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಗುರುವಾರ ಲಕ್ಕುಂಡಿಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು. ಯಾವುದೇ ಕಾರಣಕ್ಕೂ ಜನರು ಮನೆ ಬಿಟ್ಟು ಹೊರಗೆ ಬರಬಾರದು. ಜನರಿಗೆ ಅವಶ್ಯಕ ಸಾಮಗ್ರಿಗಳನ್ನು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಿಇಒ ಡಾ. ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಇದ್ದರು.