‘ಮದ್ಯಪಾನದಿಂದಾಗುವ ಅನಾಹುತಗಳು ಅಷ್ಟಿಷ್ಟಲ್ಲ. ಮದ್ಯವ್ಯಸನಿಗಳು ಮಾನಸಿಕ ಸ್ಥಿಮಿತ ಕಳೆದುಕೊಂಡಿರುತ್ತಾರೆ. ಅವರು ಯಾರ ಮಾತನ್ನೂ ಕೇಳುವುದಿಲ್ಲ. ಎಲ್ಲಿ ಬೇಕಾದಲ್ಲಿ ಬಿದ್ದು, ಹೊರಳಾಡಿ ಬಂದು ಮನೆಮಂದಿಗೆಲ್ಲ ಕೊರೊನಾ ಹಬ್ಬಿಸುವಲ್ಲಿ ಪ್ರಮುಖ ಪಾತ್ರ ವಹಿಸುವರು. ಮದ್ಯವ್ಯಸನಿಗಳಿಂದಾಗಿ ಮೊದಲು ಬೀದಿ ಪಾಲಾಗುತ್ತಿದ್ದ ಕುಟುಂಬಗಳು ಇನ್ನು ಮಸಣದ ಪಾಲಾಗುವ ದಿನಗಳು ದೂರವಿಲ್ಲ ಎನಿಸುತ್ತದೆ’ ಎಂದು ಸ್ವಾಮೀಜಿ ಸರ್ಕಾರದ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದಾರೆ.