ಶುಕ್ರವಾರ ಮತ್ತು ಶನಿವಾರಕ್ಕೆ ಹೋಲಿಸಿದರೆ, ಭಾನುವಾರ ಜಿಲ್ಲೆಯಲ್ಲಿ ಜನರ ಓಡಾಟ ಕಡಿಮೆ ಇತ್ತು. ಆದರೆ, ತರಕಾರಿ ಖರೀದಿಗಾಗಿ ಬೆಳಿಗ್ಗೆ ಇಲ್ಲಿನ ಎಪಿಎಂಸಿ ಮಾರುಕಟ್ಟೆಗೆ ಜನರು ಮುಗಿಬಿದ್ದಿದ್ದರು. ವ್ಯಾಪಾರಿಗಳು ಮನೆ ಬಾಗಿಲಿಗೆ ಬಂದು ತರಕಾರಿ ಮಾರಾಟ ಮಾಡುವ ಸೌಲಭ್ಯವನ್ನು ಜಿಲ್ಲಾಡಳಿತ ಕಲ್ಪಿಸಿದರೂ, ಸಾರ್ವಜನಿಕರು ಅಷ್ಟೊಂದು ಆಸಕ್ತಿ ತೋರಿಸುತ್ತಿಲ್ಲ.