ಮನುಷ್ಯ ಮನುಷ್ಯನನ್ನು ಪ್ರೀತಿಸುವಂತಾಗಬೇಕು ಎಂದು ಜಾತಿ ವ್ಯವಸ್ಥೆಯ ನಿರ್ಮೂಲನೆಗೆ ಪಣತೊಟ್ಟಿದ್ದ ಲಿಂ. ಸಿದ್ಧಲಿಂಗ ಸ್ವಾಮೀಜಿ 1976ರಲ್ಲಿ ಸೌಹಾರ್ದ, ಭಾವೈಕ್ಯಕ್ಕಾಗಿ ಮೊಟ್ಟ ಮೊದಲು ರೊಟ್ಟಿ ಜಾತ್ರೆಯನ್ನು ಡಂಬಳದಲ್ಲಿ ಪ್ರಾರಂಭಿಸಿದರು. ಮಠದ ಆವರಣದಲ್ಲಿ ಎಲ್ಲ ಭಕ್ತರು ಸಾಮೂಹಿಕವಾಗಿ ಕುಳಿತು ಪ್ರಸಾದ ಸ್ವೀಕರಿಸುತ್ತಿದ್ದರು. ಇದು ಖಡಕ್ ರೊಟ್ಟಿ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿತ್ತು. ಆದರೆ, ನಾಲ್ಕು ದಶಕಗಳ ನಂತರ ಡಂಬಳದ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದಲ್ಲಿ ಖಡಕ್ ರೊಟ್ಟಿ ಜಾತ್ರೆಯನ್ನು ರದ್ದುಪಡಿಸಿದೆ.