‘ಕೃಷಿ, ತೋಟಗಾರಿಕೆ ಇಲಾಖೆ ಅಧಿ ಕಾರಿಗಳು ರೈತರಿಗೆ ಹವಾಮಾನ ಆಧಾರಿತ ಬೆಳೆಗಳನ್ನು ಬೆಳೆಯುವ ಹಾಗೂ ಸೂಕ್ತ ರೀತಿಯ ಮುಂಜಾಗ್ರತಾ ಕ್ರಮ ವಹಿಸುವ ಬಗ್ಗೆ ಆಗಾಗ್ಗೆ ಮಾಹಿತಿ ನೀಡಬೇಕು. ಪುರಸಭೆ, ಪಟ್ಟಣ ಪಂಚಾಯ್ತಿ, ನಗರಸಭೆಯಿಂದ ಈಗಾಗಲೇ ವಿವಿಧ ಯೋಜನೆಗಳ ಅಡಿಯಲ್ಲಿ ಜಮೀನು ಖರೀದಿಸಿ ಅರ್ಹ ಫಲಾನುಭವಿಗಳ ಆಯ್ಕೆ, ಸೂಕ್ತ ನಿವೇಶನ ಹಂಚಿಕೆ, ನಿವೇಶನ ಪಟ್ಟಾ ವಿತರಣೆ ಕಾರ್ಯವನ್ನು ಶೀಘ್ರವೇ ಮಾಡುವ ಮೂಲಕ ಬಡವರಿಗೆ ಸರ್ಕಾರದ ಸವಲತ್ತುಗಳು ದೊರಕಿಸಿ ಕೊಡಬೇಕು’ ಎಂದು ಸೂಚಿಸಿದರು.