ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ‘ಅತ್ಯಾಚಾರ ಮಾಡಿದವರು ರಾಜಕಾರಣಿಗಳು, ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು ಅಥವಾ ಪ್ರಭಾವಿ ವ್ಯಕ್ತಿಗಳಾಗಿದ್ದಾಗ ಅವರ ವಿರುದ್ದ ತ್ವರಿತವಾಗಿ ಕ್ರಮಕೈಗೊಳ್ಳಲು ನಮ್ಮಲ್ಲಿ ಕಾನೂನು ಬಿಗಿಯಾಗಿಲ್ಲ. ಇದರಿಂದ ಅತ್ಯಾಚಾರಿಗಳಿಗೆ ಭಯವೇ ಇಲ್ಲದಂತಾಗಿದೆ. ಅಂತಹ ಘಟನೆಗಳು ನಡೆದ ನಂತರವೂ ರಾಜಾರೋಷವಾಗಿ ಓಡಾಡುತ್ತಿದ್ದಾರೆ. ದೇಶ- ವಿದೇಶಗಳಿಗೆ ಹೋಗುತ್ತಿದ್ದಾರೆ. ಆದ್ದರಿಂದ ದೇಶದಲ್ಲಿ ಕಠಿಣ ಕಾನೂನು ಅವಶ್ಯಕತೆ ತುಂಬಾ ಅಗತ್ಯವಿದೆ’ ಎಂದು ಹೇಳಿದ್ದಾರೆ.