<p><strong>ಗಜೇಂದ್ರಗಡ (ಗದಗ ಜಿಲ್ಲೆ):</strong> ರೋಣ ಮತಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಮೈಮೇಲೆ ಡೀಸೆಲ್ ಸುರಿದುಕೊಂಡು ಹೈಡ್ರಾಮ ನಡೆಸಿದರು.</p>.<p>ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ವೃತ್ತದ ಒಂದು ಬದಿಯಲ್ಲಿ ದಿಂಡೂರ ಗ್ರಾಮದ ಸಂಗಪ್ಪ ತೇಜಿ ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಕಾರ್ಯಕರ್ತರು ಹಾಗೂ ಪೊಲೀಸರು ಆತನಿಂದ ಡೀಸೆಲ್ ಕ್ಯಾನ್ ಕಸಿಕುದಕೊಂಡು ಸಮಾಧಾನಪಡಿಸಿದರು.</p>.<p>ಪ್ರತಿಭಟನೆ ಮುಗಿದ ಬಳಿಕ ಮಾರನಬಸರಿ ಗ್ರಾಮದ ರವಿ ಅಬ್ಬಿಗೇರಿ ಕಾಲಕಾಲೇಶ್ವರ ವೃತ್ತದ ಮೇಲೆ ಹತ್ತಿ ಮೈಮೇಲೆ ಡೀಸೆಲ್ ಸುರಿದುಕೊಂಡರು. ತಕ್ಷಣ ಪೊಲೀಸರು ಆತನನ್ನು ತಡೆದರು.</p>.<p>ಆತ್ಮಹತ್ಯೆಗೆ ಯತ್ನಿಸಿದ ಸಂಗಪ್ಪ ಹಾಗೂ ರವಿ, ‘ನಮ್ಮ ನಾಯಕರಾದ ಜಿ.ಎಸ್.ಪಾಟೀಲರಿಗೆ ಪದೇ ಪದೇ ಅನ್ಯಾಯವಾಗುತ್ತಿದೆ. ಈ ಬಾರಿ ಸಚಿವ ಸ್ಥಾನ ನೀಡದಿದ್ದರೆ ಅವರಿಗಾಗಿ ಪ್ರಾಣ ನೀಡಲು ಸಿದ್ದರಿದ್ದೇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ (ಗದಗ ಜಿಲ್ಲೆ):</strong> ರೋಣ ಮತಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಮೈಮೇಲೆ ಡೀಸೆಲ್ ಸುರಿದುಕೊಂಡು ಹೈಡ್ರಾಮ ನಡೆಸಿದರು.</p>.<p>ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ವೃತ್ತದ ಒಂದು ಬದಿಯಲ್ಲಿ ದಿಂಡೂರ ಗ್ರಾಮದ ಸಂಗಪ್ಪ ತೇಜಿ ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಕಾರ್ಯಕರ್ತರು ಹಾಗೂ ಪೊಲೀಸರು ಆತನಿಂದ ಡೀಸೆಲ್ ಕ್ಯಾನ್ ಕಸಿಕುದಕೊಂಡು ಸಮಾಧಾನಪಡಿಸಿದರು.</p>.<p>ಪ್ರತಿಭಟನೆ ಮುಗಿದ ಬಳಿಕ ಮಾರನಬಸರಿ ಗ್ರಾಮದ ರವಿ ಅಬ್ಬಿಗೇರಿ ಕಾಲಕಾಲೇಶ್ವರ ವೃತ್ತದ ಮೇಲೆ ಹತ್ತಿ ಮೈಮೇಲೆ ಡೀಸೆಲ್ ಸುರಿದುಕೊಂಡರು. ತಕ್ಷಣ ಪೊಲೀಸರು ಆತನನ್ನು ತಡೆದರು.</p>.<p>ಆತ್ಮಹತ್ಯೆಗೆ ಯತ್ನಿಸಿದ ಸಂಗಪ್ಪ ಹಾಗೂ ರವಿ, ‘ನಮ್ಮ ನಾಯಕರಾದ ಜಿ.ಎಸ್.ಪಾಟೀಲರಿಗೆ ಪದೇ ಪದೇ ಅನ್ಯಾಯವಾಗುತ್ತಿದೆ. ಈ ಬಾರಿ ಸಚಿವ ಸ್ಥಾನ ನೀಡದಿದ್ದರೆ ಅವರಿಗಾಗಿ ಪ್ರಾಣ ನೀಡಲು ಸಿದ್ದರಿದ್ದೇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>