‘ಕಳೆದ ಚುಣಾವಣೆ ಸಮಯದಲ್ಲಿ ಯಡಿಯೂರಪ್ಪ ಅವರು ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ, ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಎಸಿಬಿ ರದ್ದುಪಡಿಸಿ ಲೋಕಾಯುಕ್ತ ಬಲಪಡಿಸುವುದಾಗಿ ತಿಳಿಸಿದ್ದರು. ಆದರೆ, ಅಧಿಕಾರಕ್ಕೆ ಬಂದು 2 ವರ್ಷವಾದರೂ ಅವರು ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಆದ್ದರಿಂದ ಇದೇ 19ರಂದು ಯಡಿಯೂರಪ್ಪ ಅವರ ಮನೆದೇವರಾದ ಎಡಿಯೂರು ಸಿದ್ಧಲಿಂಗೇಶ್ವ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಪಾದಯಾತ್ರೆ ಆರಂಭಿಸುತ್ತೇವೆ.ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ರಮೇಶ ಎಚ್.ಜಿ. ಕುಣಿಗಲ್ ಮುಂದಾಳತ್ವದಲ್ಲಿ ಹೊರಟು ಮಾರ್ಚ್ 22ರಂದು ಬೆಂಗಳೂರಿಗೆ ತಲುಪಲಿದೆ. ಬಳಿಕ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಲೋಕಾಯುಕ್ತ ಬಲಗೊಳಿಸುವ ಮನವಿ ನೀಡಲಾಗುವುದು ’ ಎಂದು ತಿಳಿಸಿದ್ದಾರೆ.