<p>ಕಳಸ (ಗುಡಗೇರಿ): ‘ಸಾರಿಗೆ ಸಂಪರ್ಕ ಇರುವ ರಸ್ತೆಗಳನ್ನು ನನ್ನ ಅಧಿಕಾರ ಅವಧಿಯಲ್ಲಿ ಸಂಪೂರ್ಣವಾಗಿ ಸುಧಾರಣೆ ಮಾಡುತ್ತೇನೆ’ ಶಾಸಕ ಎಂ.ಆರ್.ಪಾಟೀಲ್ ಹೇಳಿದರು.</p>.<p>ತಾಲ್ಲೂಕಿನ ಕಳಸ - ಸಂಕ್ಲಿಪೂರ ಸಿ.ಸಿ.ರಸ್ತೆ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ 2024-25 ಸಾಲಿನಲ್ಲಿ ₹150 ಲಕ್ಷ ವೆಚ್ಚದ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.</p>.<p>ಈ ಭಾಗದ ಗುಡಗೇರಿ -ಸಂಶಿ, ಗುಡಗೇರಿ - ಹರಲಾಪೂರ, ಮಂಡಿಗನಾಳ - ಗುಡಗೇರಿ ಕಾಮಗಾರಿಗಳು ಆರಂಭಗೊಂಡಿದ್ದು. ಕುಂದಗೋಳ ತಾಲೂಕಿನಲ್ಲಿ ಈಗಾಗಲೇ ರೈತರು ಸಂಪರ್ಕಿಸುವ ರಸ್ತೆಗಳು, ಹಳ್ಳಕ್ಕೆ ಅಡಲಾಗಿ ಬ್ರಿಡ್ಜ್ ಗಳ ನಿರ್ಮಾಣ ಕಾಮಗಾರಿಗಳು ಆರಂಭಗೊಂಡಿವೆ. ಮಳೆಗಾಲ ಸಂದರ್ಭದಲ್ಲಿ ರೈತರಿಗೆ ಹೊಲಸಂಪರ್ಕಿಸಲು ದಾರಿ ಇಲ್ಲದಾಗಿದ್ದು, ಈ ಬ್ರಿಡ್ಜ್ ನಿರ್ಮಾಣಗಳಿಂದಾಗಿ ಸಾವಿರಾರು ರೈತರಿಗೆ ಅನುಕೂಲವಾಗಿದೆ ಎಂದರು.</p>.<p>‘ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕೇಂದ್ರ ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು. ನನ್ನ ಅಧಿಕಾರ ಅವಧಿಯಲ್ಲಿ ಕ್ಷೇತ್ರದ ಸಂಪೂರ್ಣ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದು ಹೇಳಿದರು.</p>.<p>ಅಖಂಡಪ್ಪ ಕಳಸೂರ, ಯಲ್ಲರಡ್ಡಿ ಯರಗುಪ್ಪಿ, ಸತೀಶ ಪಾಟೀಲ್, ಸೋಮಶೇಖರ ಬಡಪ್ಪನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-24-1642616011</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಳಸ (ಗುಡಗೇರಿ): ‘ಸಾರಿಗೆ ಸಂಪರ್ಕ ಇರುವ ರಸ್ತೆಗಳನ್ನು ನನ್ನ ಅಧಿಕಾರ ಅವಧಿಯಲ್ಲಿ ಸಂಪೂರ್ಣವಾಗಿ ಸುಧಾರಣೆ ಮಾಡುತ್ತೇನೆ’ ಶಾಸಕ ಎಂ.ಆರ್.ಪಾಟೀಲ್ ಹೇಳಿದರು.</p>.<p>ತಾಲ್ಲೂಕಿನ ಕಳಸ - ಸಂಕ್ಲಿಪೂರ ಸಿ.ಸಿ.ರಸ್ತೆ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ 2024-25 ಸಾಲಿನಲ್ಲಿ ₹150 ಲಕ್ಷ ವೆಚ್ಚದ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.</p>.<p>ಈ ಭಾಗದ ಗುಡಗೇರಿ -ಸಂಶಿ, ಗುಡಗೇರಿ - ಹರಲಾಪೂರ, ಮಂಡಿಗನಾಳ - ಗುಡಗೇರಿ ಕಾಮಗಾರಿಗಳು ಆರಂಭಗೊಂಡಿದ್ದು. ಕುಂದಗೋಳ ತಾಲೂಕಿನಲ್ಲಿ ಈಗಾಗಲೇ ರೈತರು ಸಂಪರ್ಕಿಸುವ ರಸ್ತೆಗಳು, ಹಳ್ಳಕ್ಕೆ ಅಡಲಾಗಿ ಬ್ರಿಡ್ಜ್ ಗಳ ನಿರ್ಮಾಣ ಕಾಮಗಾರಿಗಳು ಆರಂಭಗೊಂಡಿವೆ. ಮಳೆಗಾಲ ಸಂದರ್ಭದಲ್ಲಿ ರೈತರಿಗೆ ಹೊಲಸಂಪರ್ಕಿಸಲು ದಾರಿ ಇಲ್ಲದಾಗಿದ್ದು, ಈ ಬ್ರಿಡ್ಜ್ ನಿರ್ಮಾಣಗಳಿಂದಾಗಿ ಸಾವಿರಾರು ರೈತರಿಗೆ ಅನುಕೂಲವಾಗಿದೆ ಎಂದರು.</p>.<p>‘ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕೇಂದ್ರ ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು. ನನ್ನ ಅಧಿಕಾರ ಅವಧಿಯಲ್ಲಿ ಕ್ಷೇತ್ರದ ಸಂಪೂರ್ಣ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದು ಹೇಳಿದರು.</p>.<p>ಅಖಂಡಪ್ಪ ಕಳಸೂರ, ಯಲ್ಲರಡ್ಡಿ ಯರಗುಪ್ಪಿ, ಸತೀಶ ಪಾಟೀಲ್, ಸೋಮಶೇಖರ ಬಡಪ್ಪನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-24-1642616011</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>