ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿ, ಹೋಬಳಿ ಮಟ್ಟದಲ್ಲಿ ಪ್ರತಿ ತಿಂಗಳು ಕಂದಾಯ ಅದಾಲತ್ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ವಯೋವೃದ್ಧರ ಅಲೆದಾಟ ತಪ್ಪಿಸುವ ಕಾರಣಕ್ಕಾಗಿ ಆಧಾರ್ ಆಧಾರದ ಮೇಲೆ ಪಿಂಚಣಿದಾರರನ್ನು ಗುರುತಿಸಲಾಗುತ್ತಿದೆ. ಸಕಾಲಕ್ಕೆ ಅನುದಾನ ಬಿಡುಗಡೆ ಆಗುತ್ತಿದ್ದು, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲಾಗುವುದು ಎಂದು ತಿಳಿಸಿದರು.