<p>ಗದಗ: ಜಗದ್ಗುರು ತೋಂಟದಾರ್ಯ ಜಾತ್ರಾ ಸಮಿತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಲಿಂಗಾಯತ ಪ್ರಗತಿಶೀಲ ಸಂಘದ ವತಿಯಿಂದ ಮೇ 19ರಿಂದ 21ರವರೆಗೆ ನಾಟಕೋತ್ಸವ ಆಯೋಜಿಸಲಾಗಿದೆ.</p>.<p>ನಗರದ ಜಗದ್ಗುರು ತೋಂಟದಾರ್ಯಮಠದ ಶಿವಾನುಭವ ಮಂಟಪದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಾಟಕ ಪ್ರದರ್ಶನಗೊಳ್ಳಲಿದೆ.</p>.<p>ಸೋಮವಾರ ಸಂಜೆ 6.30ಕ್ಕೆ ‘ಮೋಳಿಗೆ ಮಾರಯ್ಯ’ ನಾಟಕ ಪ್ರದರ್ಶನಗೊಳ್ಳಲಿದೆ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನಾಟಕ ರಚಿಸಿದ್ದು, ಜಗದೀಶ ಆರ್. ಜಾಣಿ ನಿರ್ದೇಶಿಸಿದ್ದಾರೆ.</p>.<p>ಮೇ 20ರಂದು ಸಾವಿತ್ರಿಬಾಯಿ ಫುಲೆ ಅವರ ಅಕ್ಷರಯಾನಕ್ಕೆ ಸಂಬಂಧಿಸಿದ ‘ಸರಸತಿಯಾಗಲೊಲ್ಲೆ’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ರಚನೆ ಎಂ. ಭೈರೆಗೌಡ, ನಿರ್ದೇಶನ ನವೀನ ಭೂಮಿ.</p>.<p>ಮೇ 21ರಂದು ‘ಶ್ರೀ ಕೃಷ್ಣ ಸಂಧಾನ’ ನಗೆ ನಾಟಕ ಪ್ರದರ್ಶನಗೊಳ್ಳಲಿದೆ. ರಚನೆ ವಿ.ಎನ್.ಅಶ್ವತ್ಥ್. ನಿರ್ದೇಶನ ಭೀಮೇಶ ಎಚ್.ಎನ್. ಅವರದ್ದಾಗಿದೆ.</p>.<p>ಮೂರು ದಿನಗಳ ನಾಟಕೋತ್ಸವದಲ್ಲಿ ರಂಗಾಸಕ್ತರು, ಸಾಹಿತ್ಯಾಭಿಮಾನಿಗಳು, ಪರಿಷತ್ತಿನ ಸದಸ್ಯರು ಪಾಲ್ಗೊಳ್ಳಬೇಕು ಎಂದು ಪ್ರಕಟಣೆ ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ಜಗದ್ಗುರು ತೋಂಟದಾರ್ಯ ಜಾತ್ರಾ ಸಮಿತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಲಿಂಗಾಯತ ಪ್ರಗತಿಶೀಲ ಸಂಘದ ವತಿಯಿಂದ ಮೇ 19ರಿಂದ 21ರವರೆಗೆ ನಾಟಕೋತ್ಸವ ಆಯೋಜಿಸಲಾಗಿದೆ.</p>.<p>ನಗರದ ಜಗದ್ಗುರು ತೋಂಟದಾರ್ಯಮಠದ ಶಿವಾನುಭವ ಮಂಟಪದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಾಟಕ ಪ್ರದರ್ಶನಗೊಳ್ಳಲಿದೆ.</p>.<p>ಸೋಮವಾರ ಸಂಜೆ 6.30ಕ್ಕೆ ‘ಮೋಳಿಗೆ ಮಾರಯ್ಯ’ ನಾಟಕ ಪ್ರದರ್ಶನಗೊಳ್ಳಲಿದೆ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನಾಟಕ ರಚಿಸಿದ್ದು, ಜಗದೀಶ ಆರ್. ಜಾಣಿ ನಿರ್ದೇಶಿಸಿದ್ದಾರೆ.</p>.<p>ಮೇ 20ರಂದು ಸಾವಿತ್ರಿಬಾಯಿ ಫುಲೆ ಅವರ ಅಕ್ಷರಯಾನಕ್ಕೆ ಸಂಬಂಧಿಸಿದ ‘ಸರಸತಿಯಾಗಲೊಲ್ಲೆ’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ರಚನೆ ಎಂ. ಭೈರೆಗೌಡ, ನಿರ್ದೇಶನ ನವೀನ ಭೂಮಿ.</p>.<p>ಮೇ 21ರಂದು ‘ಶ್ರೀ ಕೃಷ್ಣ ಸಂಧಾನ’ ನಗೆ ನಾಟಕ ಪ್ರದರ್ಶನಗೊಳ್ಳಲಿದೆ. ರಚನೆ ವಿ.ಎನ್.ಅಶ್ವತ್ಥ್. ನಿರ್ದೇಶನ ಭೀಮೇಶ ಎಚ್.ಎನ್. ಅವರದ್ದಾಗಿದೆ.</p>.<p>ಮೂರು ದಿನಗಳ ನಾಟಕೋತ್ಸವದಲ್ಲಿ ರಂಗಾಸಕ್ತರು, ಸಾಹಿತ್ಯಾಭಿಮಾನಿಗಳು, ಪರಿಷತ್ತಿನ ಸದಸ್ಯರು ಪಾಲ್ಗೊಳ್ಳಬೇಕು ಎಂದು ಪ್ರಕಟಣೆ ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>