<p><strong>ನರಗುಂದ:</strong> ‘ರಾಜ್ಯದಲ್ಲಿ ಹಿಂದುಳಿದ ವರ್ಗದವರು ಮುಖ್ಯಮಂತ್ರಿಗಳಾಗಿದ್ದು ಕೇವಲ ಐದೇ ಮಂದಿ. ಅದರಲ್ಲಿ ಸಿದ್ದರಾಮಯ್ಯನವರು ಮಾತ್ರ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದಾರೆ. ಹಿಂದುಳಿದ ವರ್ಗದವರ ಕಾಲೆಳೆಯಲು ಜನರು ಅವಕಾಶ ಕೊಡಬಾರದು’ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.</p>.<p>ಇಲ್ಲಿ ಶನಿವಾರ ನಡೆದ ಕನಕಭವನದ ಅಡುಗೆ ಮನೆ ನಿರ್ಮಾಣದ ಕಾಮಗಾರಿ ಭೂಮಿಪೂಜೆ ಹಾಗೂ 538ನೇ ಕನಕ ಜಯಂತ್ಯುತ್ಸವದ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.</p>.<p>‘ಈವರೆಗೆ ದಲಿತ, ಅಲ್ಪಸಂಖ್ಯಾತರು ಮುಖ್ಯಮಂತ್ರಿ ಆಗಿಲ್ಲ. ಹಿಂದುಳಿದ ವರ್ಗದ ಸಿದ್ದರಾಮಯ್ಯ ಅವರು ಅಧಿಕಾರ ದೊರೆತಿದ್ದು, ಎರಡನೇ ಅವಧಿ ಪೂರ್ಣಗೊಳಿಸುವರು. ಆದರೆ, ಹಿಂದುಳಿದವರ ಅಧಿಕಾರ ತಂತಿಮೇಲಿನ ನಡಿಗೆಯಂತೆ. ಯಾವಾಗ ಕೆಡುವುತ್ತಾರೋ ತಿಳಿಯದು’ ಎಂದರು.</p>.<p>‘ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಮತ್ತು ದಲಿತರ ಅಭಿವೃದ್ಧಿಗೆ ಶ್ರಮಪಟ್ಟಿದ್ದು, ಅಹಿಂದ ಸಮುದಾಯ ಸಂಪೂರ್ಣ ಅವರ ಬೆನ್ನಿಗೆ ನಿಂತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ‘ರಾಜ್ಯದಲ್ಲಿ ಹಿಂದುಳಿದ ವರ್ಗದವರು ಮುಖ್ಯಮಂತ್ರಿಗಳಾಗಿದ್ದು ಕೇವಲ ಐದೇ ಮಂದಿ. ಅದರಲ್ಲಿ ಸಿದ್ದರಾಮಯ್ಯನವರು ಮಾತ್ರ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದಾರೆ. ಹಿಂದುಳಿದ ವರ್ಗದವರ ಕಾಲೆಳೆಯಲು ಜನರು ಅವಕಾಶ ಕೊಡಬಾರದು’ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.</p>.<p>ಇಲ್ಲಿ ಶನಿವಾರ ನಡೆದ ಕನಕಭವನದ ಅಡುಗೆ ಮನೆ ನಿರ್ಮಾಣದ ಕಾಮಗಾರಿ ಭೂಮಿಪೂಜೆ ಹಾಗೂ 538ನೇ ಕನಕ ಜಯಂತ್ಯುತ್ಸವದ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.</p>.<p>‘ಈವರೆಗೆ ದಲಿತ, ಅಲ್ಪಸಂಖ್ಯಾತರು ಮುಖ್ಯಮಂತ್ರಿ ಆಗಿಲ್ಲ. ಹಿಂದುಳಿದ ವರ್ಗದ ಸಿದ್ದರಾಮಯ್ಯ ಅವರು ಅಧಿಕಾರ ದೊರೆತಿದ್ದು, ಎರಡನೇ ಅವಧಿ ಪೂರ್ಣಗೊಳಿಸುವರು. ಆದರೆ, ಹಿಂದುಳಿದವರ ಅಧಿಕಾರ ತಂತಿಮೇಲಿನ ನಡಿಗೆಯಂತೆ. ಯಾವಾಗ ಕೆಡುವುತ್ತಾರೋ ತಿಳಿಯದು’ ಎಂದರು.</p>.<p>‘ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಮತ್ತು ದಲಿತರ ಅಭಿವೃದ್ಧಿಗೆ ಶ್ರಮಪಟ್ಟಿದ್ದು, ಅಹಿಂದ ಸಮುದಾಯ ಸಂಪೂರ್ಣ ಅವರ ಬೆನ್ನಿಗೆ ನಿಂತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>