ಪ್ರತಿ ತಿಂಗಳು ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಸಭೆ ನಡೆಸಲಾಗುವುದು. ಎಲ್ಲ ಅಧಿಕಾರಿಗಳು ನಿಗಧಿತ ಅವಧಿಯಲ್ಲಿ ಪ್ರಗತಿ ವರದಿಯನ್ನು ಸಭೆಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉದಯಕುಮಾರ ಯಲಿವಾಳ ತಿಳಿಸಿದರು. ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಎಸ್ಸಿಪಿ, ಟಿಎಸ್ಪಿ ಯೋಜನೆಯ ಪ್ರಗತಿ ವರದಿ ಕುರಿತು ಮಾಹಿತಿ ನೀಡಿದರು. ತಾಲ್ಲೂಕು ಪಂಚಾಯ್ತಿ ಸದಸ್ಯೆ ಪುಷ್ಪಾವತಿ ಪಾಟೀಲ, ವೈ.ಎಚ್.ಜಾಲವಾಡಗಿ, ಗಂಗಾಧರ ಅಣ್ಣಿಗೇರಿ, ಪ್ರಕಾಶ ವಂದೇ, ಶರಣಯ್ಯ ಕುಲಕರ್ಣಿ ಇದ್ದರು.