<p><strong>ನರಗುಂದ:</strong> ಅತಿಥಿ ಉಪನ್ಯಾಸಕರನ್ನು ಕಡೆಗಣಿಸಬೇಡಿ ಎಂದು ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದ ತಾಲ್ಲೂಕು ಮುಖಂಡ ಬಿ.ಸಿ. ಹನಮಂತಗೌಡ್ರ ಸರ್ಕಾರಕ್ಕೆ ಆಗ್ರಹಿಸಿದರು.</p>.<p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಾಲಿನ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಯ ಉದ್ದೇಶದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪುನಃಶ್ಚೇತನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಆದರೆ ಈ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಿಗೆ ಅವಕಾಶ ನೀಡದಿರುವುದು ವಿಷಾದನೀಯ. ಇದು ಸರಿಯಾದ ಕ್ರಮ ಅಲ್ ಎಂದರು.</p>.<p>ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರನ್ನು ಹೊರಗಿಟ್ಟು ಇಲಾಖೆ ನಡೆಸುತ್ತಿರುವ ಈ ಕಾರ್ಯಕ್ರಮಕ್ಕೆ ಯಾವುದೇ ಅರ್ಥವಿಲ್ಲ. ಬೋಧನೆಗೆ ಬೇಕು, ಉಳಿದ ಕಾರ್ಯಕ್ರಮ ಗಳಿಗೆ ಬೇಡವೆಂದರೆ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಆದ್ದರಿಂದ ಫಲಿತಾಂಶ ಸುಧಾರಣಾ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಿಗೂ ಅವಕಾಶ ಕಲ್ಪಿಸಬೇಕು. ಜೊತೆಗೆ ಕಾಯಂ ಉಪನ್ಯಾಸಕರಿಗೆ ನೀಡುವ ದಿನದ ಹಾಗೂ ಪ್ರಯಾಣ ಭತ್ಯೆಯನ್ನು ಅತಿಥಿ ಉಪನ್ಯಾಸಕರಿಗೂ ಒದಗಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಾದ ಆರ್ ಕೆ ಐನಾಪೂರ, ಗಿರೀಶ ಅರಶಿನಗೋಡಿ, ಮಡಿವಾಳರ, ನಾಗೇಶ ಮುಗಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ಅತಿಥಿ ಉಪನ್ಯಾಸಕರನ್ನು ಕಡೆಗಣಿಸಬೇಡಿ ಎಂದು ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದ ತಾಲ್ಲೂಕು ಮುಖಂಡ ಬಿ.ಸಿ. ಹನಮಂತಗೌಡ್ರ ಸರ್ಕಾರಕ್ಕೆ ಆಗ್ರಹಿಸಿದರು.</p>.<p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಾಲಿನ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಯ ಉದ್ದೇಶದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪುನಃಶ್ಚೇತನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಆದರೆ ಈ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಿಗೆ ಅವಕಾಶ ನೀಡದಿರುವುದು ವಿಷಾದನೀಯ. ಇದು ಸರಿಯಾದ ಕ್ರಮ ಅಲ್ ಎಂದರು.</p>.<p>ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರನ್ನು ಹೊರಗಿಟ್ಟು ಇಲಾಖೆ ನಡೆಸುತ್ತಿರುವ ಈ ಕಾರ್ಯಕ್ರಮಕ್ಕೆ ಯಾವುದೇ ಅರ್ಥವಿಲ್ಲ. ಬೋಧನೆಗೆ ಬೇಕು, ಉಳಿದ ಕಾರ್ಯಕ್ರಮ ಗಳಿಗೆ ಬೇಡವೆಂದರೆ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಆದ್ದರಿಂದ ಫಲಿತಾಂಶ ಸುಧಾರಣಾ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಿಗೂ ಅವಕಾಶ ಕಲ್ಪಿಸಬೇಕು. ಜೊತೆಗೆ ಕಾಯಂ ಉಪನ್ಯಾಸಕರಿಗೆ ನೀಡುವ ದಿನದ ಹಾಗೂ ಪ್ರಯಾಣ ಭತ್ಯೆಯನ್ನು ಅತಿಥಿ ಉಪನ್ಯಾಸಕರಿಗೂ ಒದಗಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಾದ ಆರ್ ಕೆ ಐನಾಪೂರ, ಗಿರೀಶ ಅರಶಿನಗೋಡಿ, ಮಡಿವಾಳರ, ನಾಗೇಶ ಮುಗಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>