<p><strong>ಮುಂಡರಗಿ:</strong> ‘ಶಿಂಗಟಾಲೂರ ಏತ ನೀರಾವರಿ ಯೊಜನೆಯ ಹನಿ ನೀರಾವರಿ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ತ್ವರಿತಗೊಳಿಸಿ, ಮದ್ಯಪ್ರದೇಶ ಮಾದರಿಯಲ್ಲಿ ಹನಿ ನೀರಾವರಿ ಪದ್ಧತಿ ಅನುಷ್ಠಾನಗೊಳಿಸಬೇಕು’ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ಅಗ್ನಿ ಮಹೋತ್ಸವ, ಸಾಮೂಹಿಕ ವಿವಾಹ ಹಾಗೂ ಧರ್ಮಸಭೆಯಲ್ಲಿ ಅವರು ಮಾತನಾಡಿದರು.</p>.<p>ಗದಗ, ಮುಂಡರಗಿ, ಹೂವಿನಹಡಗಲಿ ಮಾರ್ಗವಾಗಿ ಹರಪನಹಳ್ಳಿಗೆ ನೂತನ ರೈಲು ಮಾರ್ಗ ಮಂಜೂರಾತಿ ಬೇಡಿಕೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಈ ಕುರಿತು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಸಾನ್ನಿಧ್ಯ ವಹಿಸಿದ ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ‘ಕುಡಿಯುವ ನೀರು, ಸಾರಿಗೆ ಸಂಪರ್ಕ ಮೊದಲಾದ ಸೌಲಭ್ಯಗಳಿಂದ ವಂಚಿತಗೊಂಡಿದ್ದ ಮುಂಡರಗಿ ತಾಲ್ಲೂಕು ಇದೀಗ ಅಭಿವೃದ್ಧಿ ಹೊಂದುತ್ತಲಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ಕನಕಗಿರಿಯ ಚನ್ನಮಲ್ಲ ಸ್ವಾಮೀಜಿ ಮಾತನಾಡಿದರು. ಯುವ ಉದ್ಯಮಿ ಅನಂತ ಚಿತ್ರಗಾರ ಅವರಿಗೆ ‘ಶ್ರೀವೀರಭದ್ರೇಶ್ವರ ಪ್ರತಿಷ್ಠಾನ ಪುರಸ್ಕಾರ’ ನೀಡಿ ಗೌರವಿಸಲಾಯಿತು.</p>.<p>28 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು. ವೀರಭದ್ರೇಶ್ವರ ಸೇವಾ ಸಮಿತಿ ಅಧ್ಯಕ್ಷ ಎಸ್.ವಿ. ಲಿಂಬಿಕಾಯಿ ಅಧ್ಯಕ್ಷತೆ ವಹಿಸಿದ್ದರು. ಕೊಟ್ರೇಶ ಅಂಗಡಿ ಪ್ರಾಸ್ತಾವಿಕ ಮಾತನಾಡಿದರು. ಲತಾ ಕಡ್ಡಿ ಕಾರ್ಯಕ್ರಮ ನಿರೂಪಿಸಿದರು. ರೋಹಿಣಿ ಕುಬಸದ ವಂದಿಸಿದರು.</p>.<p>ಶಾಸಕ ಡಾ.ಚಂದ್ರು ಲಮಾಣಿ, ಜಾತ್ರಾ ಕಮಿಟಿ ಅಧ್ಯಕ್ಷ ವೀರೇಶ ತುಪ್ಪದ, ಮಹಿಳಾ ವೇದಿಕೆ ಅದ್ಯಕ್ಷೆ ಗೌರಮ್ಮ ಹುರಕಡ್ಲಿ, ಕೆ.ವಿ. ಹಂಚಿನಾಳ, ಶಿವಕುಮಾರಗೌಡ ಪಾಟೀಲ, ಲಿಂಗರಾಜಗೌಡ ಪಾಟೀಲ, ಪ್ರಕಾಶ ಮಹಾಜನಶಟ್ಟರ, ಲಕ್ಷ್ಮಣ ಹಳ್ಳೆಪ್ಪನವರ, ಸಾಯಿಪ್ರಸನ್ನ ಅಳವುಂಡಿ, ಶರಣಪ್ಪ ಕರಡಿ, ವಿ.ಜೆ. ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ‘ಶಿಂಗಟಾಲೂರ ಏತ ನೀರಾವರಿ ಯೊಜನೆಯ ಹನಿ ನೀರಾವರಿ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ತ್ವರಿತಗೊಳಿಸಿ, ಮದ್ಯಪ್ರದೇಶ ಮಾದರಿಯಲ್ಲಿ ಹನಿ ನೀರಾವರಿ ಪದ್ಧತಿ ಅನುಷ್ಠಾನಗೊಳಿಸಬೇಕು’ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ಅಗ್ನಿ ಮಹೋತ್ಸವ, ಸಾಮೂಹಿಕ ವಿವಾಹ ಹಾಗೂ ಧರ್ಮಸಭೆಯಲ್ಲಿ ಅವರು ಮಾತನಾಡಿದರು.</p>.<p>ಗದಗ, ಮುಂಡರಗಿ, ಹೂವಿನಹಡಗಲಿ ಮಾರ್ಗವಾಗಿ ಹರಪನಹಳ್ಳಿಗೆ ನೂತನ ರೈಲು ಮಾರ್ಗ ಮಂಜೂರಾತಿ ಬೇಡಿಕೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಈ ಕುರಿತು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಸಾನ್ನಿಧ್ಯ ವಹಿಸಿದ ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ‘ಕುಡಿಯುವ ನೀರು, ಸಾರಿಗೆ ಸಂಪರ್ಕ ಮೊದಲಾದ ಸೌಲಭ್ಯಗಳಿಂದ ವಂಚಿತಗೊಂಡಿದ್ದ ಮುಂಡರಗಿ ತಾಲ್ಲೂಕು ಇದೀಗ ಅಭಿವೃದ್ಧಿ ಹೊಂದುತ್ತಲಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ಕನಕಗಿರಿಯ ಚನ್ನಮಲ್ಲ ಸ್ವಾಮೀಜಿ ಮಾತನಾಡಿದರು. ಯುವ ಉದ್ಯಮಿ ಅನಂತ ಚಿತ್ರಗಾರ ಅವರಿಗೆ ‘ಶ್ರೀವೀರಭದ್ರೇಶ್ವರ ಪ್ರತಿಷ್ಠಾನ ಪುರಸ್ಕಾರ’ ನೀಡಿ ಗೌರವಿಸಲಾಯಿತು.</p>.<p>28 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು. ವೀರಭದ್ರೇಶ್ವರ ಸೇವಾ ಸಮಿತಿ ಅಧ್ಯಕ್ಷ ಎಸ್.ವಿ. ಲಿಂಬಿಕಾಯಿ ಅಧ್ಯಕ್ಷತೆ ವಹಿಸಿದ್ದರು. ಕೊಟ್ರೇಶ ಅಂಗಡಿ ಪ್ರಾಸ್ತಾವಿಕ ಮಾತನಾಡಿದರು. ಲತಾ ಕಡ್ಡಿ ಕಾರ್ಯಕ್ರಮ ನಿರೂಪಿಸಿದರು. ರೋಹಿಣಿ ಕುಬಸದ ವಂದಿಸಿದರು.</p>.<p>ಶಾಸಕ ಡಾ.ಚಂದ್ರು ಲಮಾಣಿ, ಜಾತ್ರಾ ಕಮಿಟಿ ಅಧ್ಯಕ್ಷ ವೀರೇಶ ತುಪ್ಪದ, ಮಹಿಳಾ ವೇದಿಕೆ ಅದ್ಯಕ್ಷೆ ಗೌರಮ್ಮ ಹುರಕಡ್ಲಿ, ಕೆ.ವಿ. ಹಂಚಿನಾಳ, ಶಿವಕುಮಾರಗೌಡ ಪಾಟೀಲ, ಲಿಂಗರಾಜಗೌಡ ಪಾಟೀಲ, ಪ್ರಕಾಶ ಮಹಾಜನಶಟ್ಟರ, ಲಕ್ಷ್ಮಣ ಹಳ್ಳೆಪ್ಪನವರ, ಸಾಯಿಪ್ರಸನ್ನ ಅಳವುಂಡಿ, ಶರಣಪ್ಪ ಕರಡಿ, ವಿ.ಜೆ. ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>