<p><strong>ರೋಣ:</strong> ಪಟ್ಟಣದ ನಿವಾಸಿ ಚೈತ್ರಾ ರಾಘವೇಂದ್ರ ಶೆಟ್ಟರ ಎಂಬುವವರು 4 ತೊಲೆ ಬಂಗಾರದ ತಾಳಿ ಸರವಿದ್ದ ಬ್ಯಾಗ್ ಅನ್ನು ಬಸ್ನಲ್ಲಿ ಮರೆತು ಹೋಗಿದ್ದು, ಅದನ್ನು ಅವರಿಗೆ ಮರಳಿಸುವ ಮೂಲಕ ವಾ.ಕ.ರಾ.ರ.ಸಾರಿಗೆ ಬಸ್ನ ರೋಣ ಘಟಕದ ಬಸ್ ಚಾಲಕ ಕೆ.ಜಿ.ದಾಸರ ಹಾಗೂ ನಿರ್ವಾಹಕ ಬಸವರಾಜ ಮುಗಳಿ ಪ್ರಾಮಾಣಿಕತೆ ಮೆರೆದಿದ್ದಾರೆ.</p>.<p>ರೋಣದಿಂದ ನರೇಗಲ್ಗೆ ತೆರಳಿದ ಮಹಿಳೆ ಮುಂದಿನ ಊರಿಗೆ ಪ್ರಯಾಣ ಬೆಳೆಸುವ ಭರದಲ್ಲಿ ಬಸ್ನಲ್ಲಿಯೇ ಬ್ಯಾಗ್ ಮರೆತು ಹೋಗಿದ್ದಾರೆ. ನಿರ್ವಾಹಕ ಹಾಗೂ ಚಾಲಕ ಬ್ಯಾಗ್ ಪರಿಶೀಲಿಸಿ, ಕೂಡಲೇ ಅದರಲ್ಲಿದ್ದ ಆಧಾರ್ ಕಾರ್ಡ್ ನೋಡಿ ಅವರನ್ನು ಸಂಪರ್ಕಿಸಿ ಬಂಗಾರ ಹಾಗೂ ಬ್ಯಾಗ್ ಮರಳಿಸಿದ್ದಾರೆ.</p>.<p><strong>ಪೊಲೀಸ್ ಇಲಾಖೆ ಮೆಚ್ಚುಗೆ:</strong> ರೋಣ ಪೊಲೀಸ್ ಠಾಣೆಗೆ ಮಹಿಳೆಯನ್ನು ಕರೆಸಿ ಬ್ಯಾಗ್ ನೀಡಲಾಯಿತು. ರೋಣ ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಕಾಶ ಬಣಕಾರ ಚಾಲಕ ಹಾಗೂ ನಿರ್ವಾಹಕರ ಕಾರ್ಯವನ್ನು ಶ್ಲಾಘಿಸಿ, ಸನ್ಮಾನಿಸಿದರು.</p>.<p>ಕೆ.ಎಸ್.ಆರ್.ಟಿ.ಸಿ ಚಾಲಕರಾದ ಸಿದ್ದಪ್ಪ ಗದಗಿನ, ಪ್ರಮೋದ ಸಂಕಣ್ಣವರ, ಮುತ್ತಣ್ಣ ಪಟ್ಟಣಶೆಟ್ಟಿ, ಮುತ್ತಣ್ಣ ಕಟಗೇರಿ, ಸಿ.ವಿ.ಭಟ್ಟೂರ, ಶಂಕರ ವಡವಡಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ:</strong> ಪಟ್ಟಣದ ನಿವಾಸಿ ಚೈತ್ರಾ ರಾಘವೇಂದ್ರ ಶೆಟ್ಟರ ಎಂಬುವವರು 4 ತೊಲೆ ಬಂಗಾರದ ತಾಳಿ ಸರವಿದ್ದ ಬ್ಯಾಗ್ ಅನ್ನು ಬಸ್ನಲ್ಲಿ ಮರೆತು ಹೋಗಿದ್ದು, ಅದನ್ನು ಅವರಿಗೆ ಮರಳಿಸುವ ಮೂಲಕ ವಾ.ಕ.ರಾ.ರ.ಸಾರಿಗೆ ಬಸ್ನ ರೋಣ ಘಟಕದ ಬಸ್ ಚಾಲಕ ಕೆ.ಜಿ.ದಾಸರ ಹಾಗೂ ನಿರ್ವಾಹಕ ಬಸವರಾಜ ಮುಗಳಿ ಪ್ರಾಮಾಣಿಕತೆ ಮೆರೆದಿದ್ದಾರೆ.</p>.<p>ರೋಣದಿಂದ ನರೇಗಲ್ಗೆ ತೆರಳಿದ ಮಹಿಳೆ ಮುಂದಿನ ಊರಿಗೆ ಪ್ರಯಾಣ ಬೆಳೆಸುವ ಭರದಲ್ಲಿ ಬಸ್ನಲ್ಲಿಯೇ ಬ್ಯಾಗ್ ಮರೆತು ಹೋಗಿದ್ದಾರೆ. ನಿರ್ವಾಹಕ ಹಾಗೂ ಚಾಲಕ ಬ್ಯಾಗ್ ಪರಿಶೀಲಿಸಿ, ಕೂಡಲೇ ಅದರಲ್ಲಿದ್ದ ಆಧಾರ್ ಕಾರ್ಡ್ ನೋಡಿ ಅವರನ್ನು ಸಂಪರ್ಕಿಸಿ ಬಂಗಾರ ಹಾಗೂ ಬ್ಯಾಗ್ ಮರಳಿಸಿದ್ದಾರೆ.</p>.<p><strong>ಪೊಲೀಸ್ ಇಲಾಖೆ ಮೆಚ್ಚುಗೆ:</strong> ರೋಣ ಪೊಲೀಸ್ ಠಾಣೆಗೆ ಮಹಿಳೆಯನ್ನು ಕರೆಸಿ ಬ್ಯಾಗ್ ನೀಡಲಾಯಿತು. ರೋಣ ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಕಾಶ ಬಣಕಾರ ಚಾಲಕ ಹಾಗೂ ನಿರ್ವಾಹಕರ ಕಾರ್ಯವನ್ನು ಶ್ಲಾಘಿಸಿ, ಸನ್ಮಾನಿಸಿದರು.</p>.<p>ಕೆ.ಎಸ್.ಆರ್.ಟಿ.ಸಿ ಚಾಲಕರಾದ ಸಿದ್ದಪ್ಪ ಗದಗಿನ, ಪ್ರಮೋದ ಸಂಕಣ್ಣವರ, ಮುತ್ತಣ್ಣ ಪಟ್ಟಣಶೆಟ್ಟಿ, ಮುತ್ತಣ್ಣ ಕಟಗೇರಿ, ಸಿ.ವಿ.ಭಟ್ಟೂರ, ಶಂಕರ ವಡವಡಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>