‘2018-19ನೇ ಸಾಲಿನ ಹಿಂಗಾರಿ ಹಂಗಾಮಿನಲ್ಲಿ 11,000 ಹೆಕ್ಟೇರ್ನಲ್ಲಿ ಕಡಲೆ ಬಿತ್ತನೆ ಗುರಿಹೊಂದಲಾಗಿತ್ತು. ನೀರಾವರಿ ಕ್ಷೇತ್ರದಲ್ಲಿ 102 ಹೆಕ್ಟೇರ್ ಬಿತ್ತನೆಯಾಗಿದ್ದರೆ, ಖುಷ್ಕಿ ಜಮೀನಿನಲ್ಲಿ 9,591 ಹೆಕ್ಟೇರ್ ಅಂದರೆ ಒಟ್ಟು ಶೇ 88 ರಷ್ಟು ಬಿತ್ತನೆಯಾಗಿದೆ. ಆದರೆ, ಮಳೆ ಕೊರತೆಯಿಂದ ಹಲವೆಡೆ ಬೆಳೆ ಒಣಗಿದೆ. ಬೆಳೆಹಾನಿ ಪರಿಹಾರಕ್ಕೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು’ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ. ನೆಗಳೂರ ತಿಳಿಸಿದರು.