<p><strong>ಶಿರಹಟ್ಟಿ:</strong> ತಾಲ್ಲೂಕಿನ ದಲಿತ ಸಮುದಾಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ಕಾರ್ಯಕರ್ತರು ಸೋಮವಾರ ಉಪ ತಹಶೀಲ್ದಾರ್ ಎಚ್.ಜೆ. ಭಾವಿಕಟ್ಟಿ ಅವರಿಗೆ ಮನವಿ ಸಲ್ಲಿಸಿದರು. </p>.<p>ಸಮಿತಿ ತಾಲ್ಲೂಕು ಸಂಚಾಲಕ ರವಿ ಗುಡಿಮನಿ ಹಾಗೂ ಯುವ ಮುಖಂಡ ಮುತ್ತು ಭಾವಿಮನಿ ಮಾತನಾಡಿ, ‘ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ದಲಿತ ಸಮುದಾಯವು ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಅಧಿಕಾರಿಗಳು ಈ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದಾರೆ’ ಎಂದರು.</p>.<p>ತಾಲ್ಲೂಕಿನಾದ್ಯಂತ ದಲಿತ ಸಮುದಾಯಕ್ಕೆ ಅವಶ್ಯವಿರುವ ಸ್ಥಳದಲ್ಲಿ ಸ್ಮಶಾನ ಭೂಮಿ ಮಂಜೂರು ಹಾಗೂ ಈಗಿರುವ ಸ್ಮಶಾನಗಳನ್ನು ಅಭಿವೃದ್ಧಿಪಡಿಸಬೇಕು. ಕೆಲವು ಗ್ರಾಮಗಳಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆಯಲ್ಲಿದ್ದು, ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>ದಲಿತರಿಗೆ ಮಂಜೂರಾದ ನಿವೇಶನ ಹಕ್ಕು ಪತ್ರ ವಿತರಣೆ, ರಸ್ತೆ ಅಭಿವೃದ್ಧಿ, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆ ಅನುದಾನ ಸೂಕ್ತ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು. </p>.<p>ಜಿಲ್ಲಾ ಸಂಘಟನೆ ಮಹಿಳಾ ಸಂಚಾಲಕಿ ಅಂಜನಾದೇವಿ ಮ್ಯಾಗೇರಿ, ಎಂ.ಕೆ. ಲಮಾಣಿ, ಪ್ರಕಾಶ್ ಬಡಣ್ಣೆವರ, ಚಂದ್ರು ಪೊತರಾಜ, ಹನುಮಂತಪ್ಪ ಬಡ್ಡೆಪ್ಪನವರ್, ಅಶೋಕ್ ಬಡವರ, ರಮೇಶ್ ಗುಡಿಮನಿ, ಶಿವನಗೌಡ ಪಾಟೀಲ, ಯಲ್ಲಪ್ಪ ಗೋಡೆಣ್ಣವರ, ಪರಮೇಶ ಗುಡಿಮನಿ, ಸುಭಾಷ್ ಮುಳಗುಂದ, ಮರಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಹಟ್ಟಿ:</strong> ತಾಲ್ಲೂಕಿನ ದಲಿತ ಸಮುದಾಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ಕಾರ್ಯಕರ್ತರು ಸೋಮವಾರ ಉಪ ತಹಶೀಲ್ದಾರ್ ಎಚ್.ಜೆ. ಭಾವಿಕಟ್ಟಿ ಅವರಿಗೆ ಮನವಿ ಸಲ್ಲಿಸಿದರು. </p>.<p>ಸಮಿತಿ ತಾಲ್ಲೂಕು ಸಂಚಾಲಕ ರವಿ ಗುಡಿಮನಿ ಹಾಗೂ ಯುವ ಮುಖಂಡ ಮುತ್ತು ಭಾವಿಮನಿ ಮಾತನಾಡಿ, ‘ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ದಲಿತ ಸಮುದಾಯವು ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಅಧಿಕಾರಿಗಳು ಈ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದಾರೆ’ ಎಂದರು.</p>.<p>ತಾಲ್ಲೂಕಿನಾದ್ಯಂತ ದಲಿತ ಸಮುದಾಯಕ್ಕೆ ಅವಶ್ಯವಿರುವ ಸ್ಥಳದಲ್ಲಿ ಸ್ಮಶಾನ ಭೂಮಿ ಮಂಜೂರು ಹಾಗೂ ಈಗಿರುವ ಸ್ಮಶಾನಗಳನ್ನು ಅಭಿವೃದ್ಧಿಪಡಿಸಬೇಕು. ಕೆಲವು ಗ್ರಾಮಗಳಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆಯಲ್ಲಿದ್ದು, ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>ದಲಿತರಿಗೆ ಮಂಜೂರಾದ ನಿವೇಶನ ಹಕ್ಕು ಪತ್ರ ವಿತರಣೆ, ರಸ್ತೆ ಅಭಿವೃದ್ಧಿ, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆ ಅನುದಾನ ಸೂಕ್ತ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು. </p>.<p>ಜಿಲ್ಲಾ ಸಂಘಟನೆ ಮಹಿಳಾ ಸಂಚಾಲಕಿ ಅಂಜನಾದೇವಿ ಮ್ಯಾಗೇರಿ, ಎಂ.ಕೆ. ಲಮಾಣಿ, ಪ್ರಕಾಶ್ ಬಡಣ್ಣೆವರ, ಚಂದ್ರು ಪೊತರಾಜ, ಹನುಮಂತಪ್ಪ ಬಡ್ಡೆಪ್ಪನವರ್, ಅಶೋಕ್ ಬಡವರ, ರಮೇಶ್ ಗುಡಿಮನಿ, ಶಿವನಗೌಡ ಪಾಟೀಲ, ಯಲ್ಲಪ್ಪ ಗೋಡೆಣ್ಣವರ, ಪರಮೇಶ ಗುಡಿಮನಿ, ಸುಭಾಷ್ ಮುಳಗುಂದ, ಮರಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>