‘ಪ್ರಾಣಿ ಬಲಿ ತಡೆಯುವಂತೆ ಮಂಗಳವಾರ ಜಿಲ್ಲಾಡಳಿತ ಭವನದಿಂದ ಬೊಮ್ಮಸಾಗರದವರೆಗೆ ‘ಅಹಿಂಸಾ ಪ್ರಾಣಿದಯಾ ಅಧ್ಯಾತ್ಮ ಸಂದೇಶ ಯಾತ್ರೆ’ ಮೂಲಕ ಜಾಗೃತಿ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಈ ಮೆರವಣಿಗೆ ಮೇಲೆ ದಾಳಿ ನಡೆಯುವ ಸಂಭವ ಇದ್ದು, ಪೊಲೀಸರು ರಕ್ಷಣೆ ನೀಡಬೇಕು’ ಎಂದರು.
‘1959ರಲ್ಲೇ ಪ್ರಾಣಿ ಬಲಿ ನಿಷೇಧ ಕಾಯ್ದೆ ಜಾರಿಗೆ ಬಂದಿದೆ. ಕರ್ನಾಟಕ ಪ್ರಾಣಿಬಲಿ ಮುಕ್ತ ರಾಜ್ಯ ಎಂದು ಘೋಷಣೆ ಆಗಿದೆ. ಆದರೂ, ಜಾತ್ರೆಗಳಲ್ಲಿ ಪ್ರಾಣಿ ಬಲಿ ಕೊಡುವುದು ಮುಂದುವರಿದಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಪ್ರಾಣಿಬಲಿ ತಡೆಯಬೇಕು’ ಎಂದು ಆಗ್ರಹಿಸಿದರು.