<p><strong>ಗದಗ</strong>: ‘ವಿದ್ಯಾವಂತ, ಬುದ್ಧಿವಂತ ಹಾಗೂ ಸಾಮಾನ್ಯಜ್ಞಾನ ಹೊಂದಿರುವ ವಿದ್ಯಾರ್ಥಿಗಳನ್ನು ರೂಪುಗೊಳಿಸಲು ಶಿಕ್ಷಕರು ಶ್ರಮಿಸಬೇಕು. ಅದಕ್ಕೆ ಪೂರಕವಾಗಿ ಲಭ್ಯವಿರುವ ಶೈಕ್ಷಣಿಕ ತಂತ್ರಜ್ಞಾನ ಮತ್ತು ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.</p>.<p>ಎಸ್ಎಸ್ಎಲ್ಸಿ ಫಲಿತಾಂಶ ವೃದ್ಧಿಗೆ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಡಿಡಿಪಿಐ ಆರ್.ಎಸ್.ಬುರುಡಿ ಮಾತನಾಡಿ, ‘ಶಿಕ್ಷಕರು ತರಗತಿಗೆ ಹೋಗುವ ಮುನ್ನ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಪಠ್ಯ ಬೋಧಿಸಬೇಕು’ ಎಂದರು.</p>.<p>ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಕೆ.ಲಮಾಣಿ ಮಾತನಾಡಿ, ‘ಸಚಿವ ಎಚ್.ಕೆ.ಪಾಟೀಲ ಅವರ ಅಪೇಕ್ಷೆಯಂತೆ ಗದಗ ಜಿಲ್ಲೆ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಉತ್ತಮ ಪ್ರಗತಿ ದಾಖಲಿಸಬೇಕಿದೆ’ ಎಂದರು.</p>.<p>‘ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರೆಲ್ಲರೂ ಈಗಿನಿಂದಲೇ ಶ್ರಮವಹಿಸಬೇಕು. ವಿದ್ಯಾರ್ಥಿಗಳಿಗೆ ಪಠ್ಯವನ್ನು ಸರಳವಾಗಿ ಅರ್ಥೈಸುವ ಮೂಲಕ ಅವರು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವ ಧೈರ್ಯ ಬೆಳೆಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ತಮ್ಮ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಬೇಕು’ ಎಂದರು.</p>.<p>ಕಾರ್ಯಾಗಾರದಲ್ಲಿ ಗದಗ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು.</p>.<p>ಶಿಕ್ಷಣ ಇಲಾಖೆ ಅಧಿಕಾರಿಗಳಾದ ಎಚ್.ಬಿ. ರಡ್ಡೇರ, ಕಂಬಳಿ ಹಾಗೂ ಮಂಗಳ ತಾಪಸ್ಕರ್, ಎಚ್.ಎನ್. ನಾಯಕ್, ಶೆಟ್ಟಪ್ಪನವರ, ವಿ.ವಿ. ನಡುವಿನಮನಿ ಇದ್ದರು. ಯರಗುಡಿ ಕಾರ್ಯಕ್ರಮ ನಿರೂಪಿಸಿದರು. ಬಡಿಗೇರ ವಂದಿಸಿದರು.</p>.<div><blockquote>ಶಿಕ್ಷಕ ವೃಂದ ಎಲ್ಲಾ ಕಾರ್ಯಗಳಲ್ಲಿ ಭಾಗಿಯಾಗುವುದರೊಂದಿಗೆ ಶೈಕ್ಷಣಿಕ ಗುಣಮಟ್ಟ ಸುಧಾರಿಸುವ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸಬೇಕು</blockquote><span class="attribution"> ಬಿ.ಎಫ್.ಪೂಜಾರ ಶಿಕ್ಷಕರ ಸಂಘಟನೆ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ವಿದ್ಯಾವಂತ, ಬುದ್ಧಿವಂತ ಹಾಗೂ ಸಾಮಾನ್ಯಜ್ಞಾನ ಹೊಂದಿರುವ ವಿದ್ಯಾರ್ಥಿಗಳನ್ನು ರೂಪುಗೊಳಿಸಲು ಶಿಕ್ಷಕರು ಶ್ರಮಿಸಬೇಕು. ಅದಕ್ಕೆ ಪೂರಕವಾಗಿ ಲಭ್ಯವಿರುವ ಶೈಕ್ಷಣಿಕ ತಂತ್ರಜ್ಞಾನ ಮತ್ತು ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.</p>.<p>ಎಸ್ಎಸ್ಎಲ್ಸಿ ಫಲಿತಾಂಶ ವೃದ್ಧಿಗೆ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಡಿಡಿಪಿಐ ಆರ್.ಎಸ್.ಬುರುಡಿ ಮಾತನಾಡಿ, ‘ಶಿಕ್ಷಕರು ತರಗತಿಗೆ ಹೋಗುವ ಮುನ್ನ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಪಠ್ಯ ಬೋಧಿಸಬೇಕು’ ಎಂದರು.</p>.<p>ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಕೆ.ಲಮಾಣಿ ಮಾತನಾಡಿ, ‘ಸಚಿವ ಎಚ್.ಕೆ.ಪಾಟೀಲ ಅವರ ಅಪೇಕ್ಷೆಯಂತೆ ಗದಗ ಜಿಲ್ಲೆ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಉತ್ತಮ ಪ್ರಗತಿ ದಾಖಲಿಸಬೇಕಿದೆ’ ಎಂದರು.</p>.<p>‘ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರೆಲ್ಲರೂ ಈಗಿನಿಂದಲೇ ಶ್ರಮವಹಿಸಬೇಕು. ವಿದ್ಯಾರ್ಥಿಗಳಿಗೆ ಪಠ್ಯವನ್ನು ಸರಳವಾಗಿ ಅರ್ಥೈಸುವ ಮೂಲಕ ಅವರು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವ ಧೈರ್ಯ ಬೆಳೆಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ತಮ್ಮ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಬೇಕು’ ಎಂದರು.</p>.<p>ಕಾರ್ಯಾಗಾರದಲ್ಲಿ ಗದಗ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು.</p>.<p>ಶಿಕ್ಷಣ ಇಲಾಖೆ ಅಧಿಕಾರಿಗಳಾದ ಎಚ್.ಬಿ. ರಡ್ಡೇರ, ಕಂಬಳಿ ಹಾಗೂ ಮಂಗಳ ತಾಪಸ್ಕರ್, ಎಚ್.ಎನ್. ನಾಯಕ್, ಶೆಟ್ಟಪ್ಪನವರ, ವಿ.ವಿ. ನಡುವಿನಮನಿ ಇದ್ದರು. ಯರಗುಡಿ ಕಾರ್ಯಕ್ರಮ ನಿರೂಪಿಸಿದರು. ಬಡಿಗೇರ ವಂದಿಸಿದರು.</p>.<div><blockquote>ಶಿಕ್ಷಕ ವೃಂದ ಎಲ್ಲಾ ಕಾರ್ಯಗಳಲ್ಲಿ ಭಾಗಿಯಾಗುವುದರೊಂದಿಗೆ ಶೈಕ್ಷಣಿಕ ಗುಣಮಟ್ಟ ಸುಧಾರಿಸುವ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸಬೇಕು</blockquote><span class="attribution"> ಬಿ.ಎಫ್.ಪೂಜಾರ ಶಿಕ್ಷಕರ ಸಂಘಟನೆ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>