<p><strong>ಗದಗ:</strong> ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನದ ಪ್ರಯುಕ್ತ ಗದಗ ಬೆಟಗೇರಿ ಅವಳಿ ನಗರದ ಮುಸ್ಲಿಮರು ಶುಕ್ರವಾರ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು.</p>.<p>ಶುಕ್ರವಾರ ಬೆಳಿಗ್ಗೆಯೇ ಮುಸ್ಲಿಮರು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಯುವಕರು ಹಾಗೂ ಮಕ್ಕಳು ಹೊಸ ಬಟ್ಟೆ ಧರಿಸಿ, ಧಾರ್ಮಿಕ ಧ್ವಜಗಳನ್ನು ಹಿಡಿದು ಮೆರವಣಿಗೆ ಮಾಡಿದರು. ಮೆರವಣಿಗೆಯುದ್ದಕ್ಕೂ ಮಕ್ಕಳು, ಹಿರಿಯರು ಘೋಷಣೆಗಳನ್ನು ಕೂಗಿದರು.</p>.<p>ಈದ್ ಮಿಲಾದ್ ಅಂಗವಾಗಿ ನಗರದ ವಿವಿಧೆಡೆಗಳಲ್ಲಿ ಮುಸ್ಲಿಮರು ಸಾರ್ವಜನಿಕರಿಗೆ ಫಲೂದಾ, ಪಾಯಸ, ಬಾಳೆಹಣ್ಣು ಸೇರಿದಂತೆ ವಿವಿಧ ತಿನಿಸುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಂಚುತ್ತಿದ್ದ ದೃಶ್ಯಗಳು ಕಂಡು ಬಂದವು.</p>.<p>ನಗರದ ಹಳೆ ಬಸ್ ನಿಲ್ದಾಣದ ಎದುರಿನಲ್ಲಿರುವ ಉರ್ದು ಶಾಲಾ ಮೈದಾನದಲ್ಲಿ ಈದ್ ಮಿಲಾದ್ ಸಭಾ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>‘ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಪ್ರವಾದಿ ಮಹ್ಮದ್ ಪೈಗಂಬರ ಅವರ ಜೀವನ ಆದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು’ ಎಂದು ಮುಸ್ಲಿಂ ಧರ್ಮಗಳು ಸಂದೇಶ ನೀಡಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ ಬಬರ್ಚಿ ಕಾರ್ಯಕ್ರಮ ಉದ್ಘಾಟಿಸಿದರು. ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ಸಾನ್ನಿಧ್ಯ ವಹಿಸಿದ್ದರು.</p>.<p>ಮೌಲಾನ ಮುಫ್ತಿ ಮಹಮ್ಮದ ನಿಜಾಮುದ್ದೀನ್ ಕಾಸ್ತಿ ಉಪನ್ಯಾಸ ನೀಡಿದರು. ಮೌಲಾನ ಇನಾಯಿತುಲ್ಲಾಸಾಬ ಪೀರ್ಜಾದೆ ಹಾಗೂ ರಜಾಕ್ ಡಕೇದ, ಮೌಲಾನ ಅಬ್ದುಲ್ ರಹೀಮ ಚಂದುನವರು ಪ್ರಾರ್ಥನೆ ಮಾಡಿದರು.</p>.<p>ಉಸ್ಮಾನ್ ಮಾಳೇಕೊಪ್ಪ, ಆರೀಫ್ ಹುನಗುಂದ, ಶೌಕತ್ ಅಣ್ಣಿಗೇರಿ, ಅಶ್ಪಾಕ್ಅಲಿ ಹೊಸಳ್ಳಿ, ಶೌಕತ್ಅಲಿ ಕಾತರಕಿ, ಇಮಾಮ್ಸಾಬ ನಮಾಜಿ, ತೌಸಿಫ್ ಢಾಲಾಯತ, ಜಾಕೀರ್ ಬಾಗಲಕೋಟ, ಅಕ್ಬರ್ ಅತ್ತಾರ, ಅಬ್ದುಲ್ ಉಮಚಗಿ, ಹನೀಫ್ ಮುಳಗುಂದ, ಮೆಹಬೂಬಸಾಬ ರೋಣ, ಅನ್ವರ್ ಈಟಿ, ಸಲೀಮ್ ಬಳ್ಳಾರಿ ಇದ್ದರು.</p>.<p>ಜನಾಬ ಮಹಮ್ಮದಶಫಿ ಯರಗುಡಿ ನಿರೂಪಣೆ ಮಾಡಿದರು. ಭಾಷಾಸಾಬ ಮಲ್ಲಸಮುದ್ರ ವಂದಿಸಿದರು. </p>.<p>ಸಭಾ ಕಾರ್ಯಕ್ರಮದ ಬಳಿಕ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ, ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ ನಡೆಯಿತು. ಬಳಿಕ ಅನ್ನ ಸಂತರ್ಪಣೆ ನಡೆಯಿತು.</p>.<p>ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಕಲ್ಪಿಸುವ ಜತೆಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನದ ಪ್ರಯುಕ್ತ ಗದಗ ಬೆಟಗೇರಿ ಅವಳಿ ನಗರದ ಮುಸ್ಲಿಮರು ಶುಕ್ರವಾರ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು.</p>.<p>ಶುಕ್ರವಾರ ಬೆಳಿಗ್ಗೆಯೇ ಮುಸ್ಲಿಮರು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಯುವಕರು ಹಾಗೂ ಮಕ್ಕಳು ಹೊಸ ಬಟ್ಟೆ ಧರಿಸಿ, ಧಾರ್ಮಿಕ ಧ್ವಜಗಳನ್ನು ಹಿಡಿದು ಮೆರವಣಿಗೆ ಮಾಡಿದರು. ಮೆರವಣಿಗೆಯುದ್ದಕ್ಕೂ ಮಕ್ಕಳು, ಹಿರಿಯರು ಘೋಷಣೆಗಳನ್ನು ಕೂಗಿದರು.</p>.<p>ಈದ್ ಮಿಲಾದ್ ಅಂಗವಾಗಿ ನಗರದ ವಿವಿಧೆಡೆಗಳಲ್ಲಿ ಮುಸ್ಲಿಮರು ಸಾರ್ವಜನಿಕರಿಗೆ ಫಲೂದಾ, ಪಾಯಸ, ಬಾಳೆಹಣ್ಣು ಸೇರಿದಂತೆ ವಿವಿಧ ತಿನಿಸುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಂಚುತ್ತಿದ್ದ ದೃಶ್ಯಗಳು ಕಂಡು ಬಂದವು.</p>.<p>ನಗರದ ಹಳೆ ಬಸ್ ನಿಲ್ದಾಣದ ಎದುರಿನಲ್ಲಿರುವ ಉರ್ದು ಶಾಲಾ ಮೈದಾನದಲ್ಲಿ ಈದ್ ಮಿಲಾದ್ ಸಭಾ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>‘ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಪ್ರವಾದಿ ಮಹ್ಮದ್ ಪೈಗಂಬರ ಅವರ ಜೀವನ ಆದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು’ ಎಂದು ಮುಸ್ಲಿಂ ಧರ್ಮಗಳು ಸಂದೇಶ ನೀಡಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ ಬಬರ್ಚಿ ಕಾರ್ಯಕ್ರಮ ಉದ್ಘಾಟಿಸಿದರು. ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ಸಾನ್ನಿಧ್ಯ ವಹಿಸಿದ್ದರು.</p>.<p>ಮೌಲಾನ ಮುಫ್ತಿ ಮಹಮ್ಮದ ನಿಜಾಮುದ್ದೀನ್ ಕಾಸ್ತಿ ಉಪನ್ಯಾಸ ನೀಡಿದರು. ಮೌಲಾನ ಇನಾಯಿತುಲ್ಲಾಸಾಬ ಪೀರ್ಜಾದೆ ಹಾಗೂ ರಜಾಕ್ ಡಕೇದ, ಮೌಲಾನ ಅಬ್ದುಲ್ ರಹೀಮ ಚಂದುನವರು ಪ್ರಾರ್ಥನೆ ಮಾಡಿದರು.</p>.<p>ಉಸ್ಮಾನ್ ಮಾಳೇಕೊಪ್ಪ, ಆರೀಫ್ ಹುನಗುಂದ, ಶೌಕತ್ ಅಣ್ಣಿಗೇರಿ, ಅಶ್ಪಾಕ್ಅಲಿ ಹೊಸಳ್ಳಿ, ಶೌಕತ್ಅಲಿ ಕಾತರಕಿ, ಇಮಾಮ್ಸಾಬ ನಮಾಜಿ, ತೌಸಿಫ್ ಢಾಲಾಯತ, ಜಾಕೀರ್ ಬಾಗಲಕೋಟ, ಅಕ್ಬರ್ ಅತ್ತಾರ, ಅಬ್ದುಲ್ ಉಮಚಗಿ, ಹನೀಫ್ ಮುಳಗುಂದ, ಮೆಹಬೂಬಸಾಬ ರೋಣ, ಅನ್ವರ್ ಈಟಿ, ಸಲೀಮ್ ಬಳ್ಳಾರಿ ಇದ್ದರು.</p>.<p>ಜನಾಬ ಮಹಮ್ಮದಶಫಿ ಯರಗುಡಿ ನಿರೂಪಣೆ ಮಾಡಿದರು. ಭಾಷಾಸಾಬ ಮಲ್ಲಸಮುದ್ರ ವಂದಿಸಿದರು. </p>.<p>ಸಭಾ ಕಾರ್ಯಕ್ರಮದ ಬಳಿಕ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ, ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ ನಡೆಯಿತು. ಬಳಿಕ ಅನ್ನ ಸಂತರ್ಪಣೆ ನಡೆಯಿತು.</p>.<p>ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಕಲ್ಪಿಸುವ ಜತೆಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>