<p><strong>ಹೊಳೆಆಲೂರ (ಗದಗ): </strong>ಮತದಾನ ಮಾಡುವ ವೇಳೆ ಬೆಳವಣಕಿಯ ಜಿಲ್ಲಾ ಪಂಚಾಯ್ತಿ ಸದಸ್ಯ ಶಿವಕುಮಾರ ನೀಲಗುಂದ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ ಘಟನೆ ಭಾನುವಾರ ನಡೆದಿದೆ.</p>.<p>ರೋಣ ತಾಲ್ಲೂಕಿನ ಗ್ರಾಮ ಪಂಚಾಯ್ತಿಯ 105ನೇ ಮತಗಟ್ಟೆಗೆ ಬೆಳಿಗ್ಗೆ 8ಕ್ಕೆ ಮತದಾನ ಮಾಡಲು ಬಂದ ನೀಲಗುಂದ ಅವರು, ಪಕ್ಕದಲ್ಲಿ ಇದ್ದ ಮಹಿಳೆಯೊಬ್ಬರಿಗೆ ಇಂತಹ ವ್ಯಕ್ತಿಗೆ ಮತ ಹಾಕು ಎಂದು ಸೂಚನೆ ನೀಡಿದರು ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.</p>.<p>ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು, ಕಾಂಗ್ರೆಸ್ ಕಾರ್ಯಕರ್ತರು ಶಿವಕುಮಾರ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದರಿಂದ ಮತದಾನ ಸ್ಥಗಿತವಾಯಿತು. ಎರಡೂ ಪಕ್ಷಗಳ ಕಾರ್ಯಕರ್ತರು ಗುಂಪಾಗಿ ಜಮಾಯಿಸಿದ್ದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p>.<p>‘ಹಲ್ಲೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವವರೆಗೆ ಮತದಾನ ಸ್ಥಗಿತಗೊಳಿಸಬೇಕು. ಜನಪ್ರತಿನಿಧಿಯಾದ ನನ್ನ ಮೇಲೆಯೇ ಅವರು ಬೂತ್ನೊಳಕ್ಕೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಇನ್ನು ಜನಸಾಮಾನ್ಯರ ಗತಿಯೇನು. ಹಲ್ಲೆಕೋರರನ್ನು ಬಂಧಿಸಬೇಕು. ಅಲ್ಲಿಯವರೆಗೆ ಮತದಾನಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಪ್ರತಿಭಟನೆಗೆ ಕುಳಿತರು.</p>.<p>ಈ ವೇಳೆ ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಸ್ಥಳಕ್ಕೆ ಭೇಟಿ ನೀಡಿ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಮನವೊಲಿಸಿದರು. ಬಳಿಕ 8.30ಕ್ಕೆ ಮತದಾನ ಆರಂಭವಾಯಿತು.</p>.<p>ಘಟನೆಗೆ ಸಂಬಂಧಪಟ್ಟಂತೆ ಶೇಖರಗೌಡ ಹಿರೇಗೌಡ್ರ, ಬಸನಗೌಡ ಹಿರೇಗೌಡ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ಯುವ ಸಂದರ್ಭದಲ್ಲಿ, ಅಧಿಕಾರಿಗಳು ಒಂದು ಪಕ್ಷದ ಪರವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಒಂದು ಗುಂಪು ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು<br />ಚದುರಿಸಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು.</p>.<p>‘ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದಾಗಿನಿಂದ ನನ್ನ ಜೊತೆ ಜಗಳಕ್ಕೆ ಇಳಿಯುತ್ತಿದ್ದಾರೆ. ಇಂದು ನನ್ನ ಮೇಲೆ ಹಲ್ಲೆ ಮಾಡಲೇ ಬೇಕು ಎಂಬ ನಿರ್ಧಾರ ಮಾಡಿಯೇ ಈ ಕೃತ್ಯ ಎಸಗಿದ್ದಾರೆ. ಇವರಿಗೆ ಕಠಿಣ ಶಿಕ್ಷೆ ನೀಡಬೇಕು’ ಎಂದು ಶಿವಕುಮಾರ ನೀಲಗುಂದ<br />ಆಗ್ರಹಿಸಿದ್ದಾರೆ.</p>.<p>‘ಮತದಾನಕ್ಕೆ ಅಡ್ಡಿ ಪಡಿಸುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಕೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯ ಶಿವಕುಮಾರ ನೀಲಗುಂದ ಅವರನ್ನು ರೋಣದ ಡಾ. ಭೀಮಸೇನ ಜೋಶಿ ಆಸ್ಪತ್ರೆಗೆ ದಾಖಲಾಗಿದ್ದು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆಆಲೂರ (ಗದಗ): </strong>ಮತದಾನ ಮಾಡುವ ವೇಳೆ ಬೆಳವಣಕಿಯ ಜಿಲ್ಲಾ ಪಂಚಾಯ್ತಿ ಸದಸ್ಯ ಶಿವಕುಮಾರ ನೀಲಗುಂದ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ ಘಟನೆ ಭಾನುವಾರ ನಡೆದಿದೆ.</p>.<p>ರೋಣ ತಾಲ್ಲೂಕಿನ ಗ್ರಾಮ ಪಂಚಾಯ್ತಿಯ 105ನೇ ಮತಗಟ್ಟೆಗೆ ಬೆಳಿಗ್ಗೆ 8ಕ್ಕೆ ಮತದಾನ ಮಾಡಲು ಬಂದ ನೀಲಗುಂದ ಅವರು, ಪಕ್ಕದಲ್ಲಿ ಇದ್ದ ಮಹಿಳೆಯೊಬ್ಬರಿಗೆ ಇಂತಹ ವ್ಯಕ್ತಿಗೆ ಮತ ಹಾಕು ಎಂದು ಸೂಚನೆ ನೀಡಿದರು ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.</p>.<p>ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು, ಕಾಂಗ್ರೆಸ್ ಕಾರ್ಯಕರ್ತರು ಶಿವಕುಮಾರ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದರಿಂದ ಮತದಾನ ಸ್ಥಗಿತವಾಯಿತು. ಎರಡೂ ಪಕ್ಷಗಳ ಕಾರ್ಯಕರ್ತರು ಗುಂಪಾಗಿ ಜಮಾಯಿಸಿದ್ದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p>.<p>‘ಹಲ್ಲೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವವರೆಗೆ ಮತದಾನ ಸ್ಥಗಿತಗೊಳಿಸಬೇಕು. ಜನಪ್ರತಿನಿಧಿಯಾದ ನನ್ನ ಮೇಲೆಯೇ ಅವರು ಬೂತ್ನೊಳಕ್ಕೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಇನ್ನು ಜನಸಾಮಾನ್ಯರ ಗತಿಯೇನು. ಹಲ್ಲೆಕೋರರನ್ನು ಬಂಧಿಸಬೇಕು. ಅಲ್ಲಿಯವರೆಗೆ ಮತದಾನಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಪ್ರತಿಭಟನೆಗೆ ಕುಳಿತರು.</p>.<p>ಈ ವೇಳೆ ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಸ್ಥಳಕ್ಕೆ ಭೇಟಿ ನೀಡಿ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಮನವೊಲಿಸಿದರು. ಬಳಿಕ 8.30ಕ್ಕೆ ಮತದಾನ ಆರಂಭವಾಯಿತು.</p>.<p>ಘಟನೆಗೆ ಸಂಬಂಧಪಟ್ಟಂತೆ ಶೇಖರಗೌಡ ಹಿರೇಗೌಡ್ರ, ಬಸನಗೌಡ ಹಿರೇಗೌಡ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ಯುವ ಸಂದರ್ಭದಲ್ಲಿ, ಅಧಿಕಾರಿಗಳು ಒಂದು ಪಕ್ಷದ ಪರವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಒಂದು ಗುಂಪು ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು<br />ಚದುರಿಸಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು.</p>.<p>‘ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದಾಗಿನಿಂದ ನನ್ನ ಜೊತೆ ಜಗಳಕ್ಕೆ ಇಳಿಯುತ್ತಿದ್ದಾರೆ. ಇಂದು ನನ್ನ ಮೇಲೆ ಹಲ್ಲೆ ಮಾಡಲೇ ಬೇಕು ಎಂಬ ನಿರ್ಧಾರ ಮಾಡಿಯೇ ಈ ಕೃತ್ಯ ಎಸಗಿದ್ದಾರೆ. ಇವರಿಗೆ ಕಠಿಣ ಶಿಕ್ಷೆ ನೀಡಬೇಕು’ ಎಂದು ಶಿವಕುಮಾರ ನೀಲಗುಂದ<br />ಆಗ್ರಹಿಸಿದ್ದಾರೆ.</p>.<p>‘ಮತದಾನಕ್ಕೆ ಅಡ್ಡಿ ಪಡಿಸುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಕೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯ ಶಿವಕುಮಾರ ನೀಲಗುಂದ ಅವರನ್ನು ರೋಣದ ಡಾ. ಭೀಮಸೇನ ಜೋಶಿ ಆಸ್ಪತ್ರೆಗೆ ದಾಖಲಾಗಿದ್ದು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>