<p><strong>ಗದಗ: ‘</strong>ಆಧುನಿಕ ದಿನಗಳಲ್ಲಿ ಪರಿಸರದ ಮೇಲಿನ ಕಾಳಜಿ ಕಡಿಮೆ ಆಗಿರುವುದು ಆತಂಕದ ವಿಷಯ. ಉತ್ತಮ ಪರಿಸರ ಹೊಂದುವುದು ಇಂದಿನ ಅಗತ್ಯವಾಗಿದೆ. ಆಗ ಮಾತ್ರ ನಾವೆಲ್ಲರೂ ಆರೋಗ್ಯದಿಂದ ಇರಲು ಸಾಧ್ಯ’ ಎಂದು ಲೋಕಾಯುಕ್ತ ಅಧಿಕಾರಿ ಪರಮೇಶ್ವರ ಕವಟಗಿ ಹೇಳಿದರು.</p>.<p>ನಗರದ ಡಿಜಿಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಈ ವರ್ಷದ ಘೋಷವಾಕ್ಯದಂತೆ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಸಂತೋಷ ಎನ್. ಬೆಳವಡಿ ಮಾತನಾಡಿ, ‘ಪರಿಸರ ಉಳಿಸುವುದು, ಬೆಳೆಸುವುದು, ಮಾಲಿನ್ಯ ಮುಕ್ತ ಮಾಡುವುದರ ಜೊತೆಗೆ ಮುಂದಿನ ಪೀಳಿಗೆಗಾಗಿ ಗಿಡಗಳನ್ನು ನೆಟ್ಟು, ಪೋಷಿಸಬೇಕು’ ಎಂದರು.</p>.<p>‘ಮಹಾವಿದ್ಯಾಲಯದ ಸಿಬ್ಬಂದಿ ತಮ್ಮ ಜನ್ಮದಿನದಂದು ಮಹಾವಿದ್ಯಾಲಯದ ಆವರಣದಲ್ಲಿ ಸಸಿ ನೆಡುವ ಮೂಲಕ ಮಹಾವಿದ್ಯಾಲಯದಲ್ಲಿ ಔಷಧ ವನ ನಿರ್ಮಾಣ ಮಾಡಲಾಗುತ್ತಿದೆ’ ಎಂದರು.</p>.<p>ಎನ್ಎಸ್ಎಸ್ ಘಟಕದ ಸಂಯೋಜಕ ಡಾ. ಬೂದೇಶ ಎಂ. ಕನಾಜ ಮಾತನಾಡಿದರು. ದ್ರವ್ಯಗುಣ ವಿಭಾಗದ ಮುಖ್ಯಸ್ಥ ಡಾ. ಡಿ.ಜಿ.ಕೋಲ್ಮೆ, ಜೈರಾಜ್ ಪಿ. ಬಸರಿಗಿಡದ, ಎಂ.ವಿ.ಸೊಬಗಿನ, ಕುಮಾರ ಚೌಡಪ್ಪಳವರ, ಮಹಾವಿದ್ಯಾಲಯದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<p>ಹರ್ಷ, ನಂದಿತಾ ಕಾರ್ಯಕ್ರಮ ನಿರೂಪಿಸಿದರು. ರೋಹಿಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: ‘</strong>ಆಧುನಿಕ ದಿನಗಳಲ್ಲಿ ಪರಿಸರದ ಮೇಲಿನ ಕಾಳಜಿ ಕಡಿಮೆ ಆಗಿರುವುದು ಆತಂಕದ ವಿಷಯ. ಉತ್ತಮ ಪರಿಸರ ಹೊಂದುವುದು ಇಂದಿನ ಅಗತ್ಯವಾಗಿದೆ. ಆಗ ಮಾತ್ರ ನಾವೆಲ್ಲರೂ ಆರೋಗ್ಯದಿಂದ ಇರಲು ಸಾಧ್ಯ’ ಎಂದು ಲೋಕಾಯುಕ್ತ ಅಧಿಕಾರಿ ಪರಮೇಶ್ವರ ಕವಟಗಿ ಹೇಳಿದರು.</p>.<p>ನಗರದ ಡಿಜಿಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಈ ವರ್ಷದ ಘೋಷವಾಕ್ಯದಂತೆ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಸಂತೋಷ ಎನ್. ಬೆಳವಡಿ ಮಾತನಾಡಿ, ‘ಪರಿಸರ ಉಳಿಸುವುದು, ಬೆಳೆಸುವುದು, ಮಾಲಿನ್ಯ ಮುಕ್ತ ಮಾಡುವುದರ ಜೊತೆಗೆ ಮುಂದಿನ ಪೀಳಿಗೆಗಾಗಿ ಗಿಡಗಳನ್ನು ನೆಟ್ಟು, ಪೋಷಿಸಬೇಕು’ ಎಂದರು.</p>.<p>‘ಮಹಾವಿದ್ಯಾಲಯದ ಸಿಬ್ಬಂದಿ ತಮ್ಮ ಜನ್ಮದಿನದಂದು ಮಹಾವಿದ್ಯಾಲಯದ ಆವರಣದಲ್ಲಿ ಸಸಿ ನೆಡುವ ಮೂಲಕ ಮಹಾವಿದ್ಯಾಲಯದಲ್ಲಿ ಔಷಧ ವನ ನಿರ್ಮಾಣ ಮಾಡಲಾಗುತ್ತಿದೆ’ ಎಂದರು.</p>.<p>ಎನ್ಎಸ್ಎಸ್ ಘಟಕದ ಸಂಯೋಜಕ ಡಾ. ಬೂದೇಶ ಎಂ. ಕನಾಜ ಮಾತನಾಡಿದರು. ದ್ರವ್ಯಗುಣ ವಿಭಾಗದ ಮುಖ್ಯಸ್ಥ ಡಾ. ಡಿ.ಜಿ.ಕೋಲ್ಮೆ, ಜೈರಾಜ್ ಪಿ. ಬಸರಿಗಿಡದ, ಎಂ.ವಿ.ಸೊಬಗಿನ, ಕುಮಾರ ಚೌಡಪ್ಪಳವರ, ಮಹಾವಿದ್ಯಾಲಯದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<p>ಹರ್ಷ, ನಂದಿತಾ ಕಾರ್ಯಕ್ರಮ ನಿರೂಪಿಸಿದರು. ರೋಹಿಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>