‘ಶಾಲೆಯ ಒಟ್ಟು 43 ವಿದ್ಯಾರ್ಥಿಗಳಿಗೆ ‘ಮಹನ್ನದ (ಸ) ಎಲ್ಲರಿಗಾಗಿ’ ಹಾಗೂ ‘ಅಂತಿಮ ಪ್ರವಾದಿ ಮಹಮ್ಮದ (ಸ)’ ಪುಸ್ತಕವನ್ನು ತರಗತಿಯಲ್ಲಿ ವಿತರಿಸಿ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರಿಗೂ ಮಾಹಿತಿ ನೀಡದೇ ಪ್ರಬಂಧ ಸ್ಪರ್ಧೆ ನಡೆಸಿದ್ದಾರೆ. ಬಹುಮಾನ ನೀಡುವ ಆಮಿಷವನ್ನೂ ಒಡ್ಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರೀತಿ ಮಾಡಿರುವುದರಿಂದ ಹಾಗೂ ಪ್ರಾಥಮಿಕ ವಿಚಾರಣೆಯಲ್ಲಿ ಮೇಲ್ನೋಟಕ್ಕೆ ಆರೋಪ ಸಾಬೀತಾಗಿರುವುದರಿಂದ ಈ ಆದೇಶ ಹೊರಡಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.