<p><strong>ನರಗುಂದ:</strong> ‘ಬುದ್ಧ ಪೂರ್ಣಿಮೆ ದಿನದಂದು ಬುದ್ಧನ ಜೀವನ, ಬೋಧನೆಗಳನ್ನು ಅನುಸರಿಸಬೆಕು. ಜೀವನದುದ್ದಕ್ಕೂ ಬುದ್ದನ ಆದರ್ಶಗಳನ್ನು ಪಾಲಿಸಬೇಕು’ ಎಂದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು ಹೇಳಿದರು.</p>.<p>ತಾಲ್ಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತ ಮಠದಲ್ಲಿ ಸೋಮವಾರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ನಡೆದ ಬುದ್ಧ ಪೂರ್ಣಿಮೆ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಬುದ್ದನ ಜೀವನ ಸಿದ್ದಾಂತಗಳು ಸಮಕಾಲೀನ ಸಮಾಜಕ್ಕೆ ಅಗತ್ಯವಿದೆ. ಸಮಾನತೆಯ ಪರಿಕಲ್ಪನೆಯನ್ನು ನೀಡಿದ ಬುದ್ಧನ ತತ್ವ ಸಂದೇಶಗಳು ಸರ್ವಕಾಲಿಕ. ಅವರ ಸಂದೇಶಗಳು ವಿಶ್ವವನ್ನೇ ವ್ಯಾಪಿಸಿವೆ. ಸಾಂಸಾರೀಕ, ಪ್ರಭುತ್ವ ಜೀವನದಿಂದ ಹೊರಬಂದ ಸಿದ್ದಾರ್ಥ ಬುದ್ದನಾದ ಚರಿತ್ರೆ ರೊಮಾಂಚನಕಾರಿ. ಎಲ್ಲರೂ ಬುದ್ಧನನ್ನು ಅರಿಯಬೇಕು’ ಎಂದರು.</p>.<p>ಜಿಲ್ಲಾ ಪ್ರಭಾರ ದೈಹಿಕ ಶಿಕ್ಷಣಾಧಿಕಾರಿ ಎನ್.ಆರ್. ನಿಡಗುಂದಿ, ಸಂಪನ್ಮೂಲ ಅಧಿಕಾರಿ ಭೂಸರೆಡ್ಡಿ, ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಜಿ. ಮಣ್ಣೂರಮಠ, ಚಂದ್ರು ಮಂಟೂರಮಠ, ವಿರಕ್ತಮಠ, ನಿವೃತ್ತ ಶಿಕ್ಷಕ ಎಸ್.ಬಿ. ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ‘ಬುದ್ಧ ಪೂರ್ಣಿಮೆ ದಿನದಂದು ಬುದ್ಧನ ಜೀವನ, ಬೋಧನೆಗಳನ್ನು ಅನುಸರಿಸಬೆಕು. ಜೀವನದುದ್ದಕ್ಕೂ ಬುದ್ದನ ಆದರ್ಶಗಳನ್ನು ಪಾಲಿಸಬೇಕು’ ಎಂದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು ಹೇಳಿದರು.</p>.<p>ತಾಲ್ಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತ ಮಠದಲ್ಲಿ ಸೋಮವಾರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ನಡೆದ ಬುದ್ಧ ಪೂರ್ಣಿಮೆ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಬುದ್ದನ ಜೀವನ ಸಿದ್ದಾಂತಗಳು ಸಮಕಾಲೀನ ಸಮಾಜಕ್ಕೆ ಅಗತ್ಯವಿದೆ. ಸಮಾನತೆಯ ಪರಿಕಲ್ಪನೆಯನ್ನು ನೀಡಿದ ಬುದ್ಧನ ತತ್ವ ಸಂದೇಶಗಳು ಸರ್ವಕಾಲಿಕ. ಅವರ ಸಂದೇಶಗಳು ವಿಶ್ವವನ್ನೇ ವ್ಯಾಪಿಸಿವೆ. ಸಾಂಸಾರೀಕ, ಪ್ರಭುತ್ವ ಜೀವನದಿಂದ ಹೊರಬಂದ ಸಿದ್ದಾರ್ಥ ಬುದ್ದನಾದ ಚರಿತ್ರೆ ರೊಮಾಂಚನಕಾರಿ. ಎಲ್ಲರೂ ಬುದ್ಧನನ್ನು ಅರಿಯಬೇಕು’ ಎಂದರು.</p>.<p>ಜಿಲ್ಲಾ ಪ್ರಭಾರ ದೈಹಿಕ ಶಿಕ್ಷಣಾಧಿಕಾರಿ ಎನ್.ಆರ್. ನಿಡಗುಂದಿ, ಸಂಪನ್ಮೂಲ ಅಧಿಕಾರಿ ಭೂಸರೆಡ್ಡಿ, ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಜಿ. ಮಣ್ಣೂರಮಠ, ಚಂದ್ರು ಮಂಟೂರಮಠ, ವಿರಕ್ತಮಠ, ನಿವೃತ್ತ ಶಿಕ್ಷಕ ಎಸ್.ಬಿ. ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>