<p><strong>ಗದಗ</strong>: ‘ಪರೀಕ್ಷಾ ಅವಧಿಯು ವಿದ್ಯಾರ್ಥಿಯ ಶೈಕ್ಷಣಿಕ ಪ್ರಯಾಣದಲ್ಲಿ ನಿರ್ಣಾಯಕ ಹಂತವಾಗಿದೆ. ವಿದ್ಯಾರ್ಥಿಗಳು ಒತ್ತಡಮುಕ್ತರಾಗಿ ಪರೀಕ್ಷೆಗೆ ಸಜ್ಜಾಗಲು ಕೆ.ಎಚ್. ಪಾಟೀಲ ಕರಿಯರ್ ಅಕಾಡೆಮಿ ನೆರವಾಗಲಿದೆ’ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಹುಲಕೋಟಿಯ ಕೆ.ಎಚ್.ಪಾಟೀಲ ಸಭಾಭವನದಲ್ಲಿ ಕೆ.ಎಚ್. ಪಾಟೀಲ ಕರಿಯರ್ ಅಕಾಡೆಮಿ ವತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಉತ್ಕರ್ಷತೆಯೆಡೆಗೆ’ ವಿದ್ಯಾರ್ಥಿ ಸ್ನೇಹಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ತರಗತಿಗಳಲ್ಲಿ ಶೈಕ್ಷಣಿಕವಾಗಿ ಸಿದ್ಧರಾಗಿದ್ದರೂ ವೈಫಲ್ಯದ ಭಯ, ಇತರರೊಂದಿಗೆ ಹೋಲಿಕೆ ಮತ್ತು ನಿರೀಕ್ಷೆಗಳ ಬಗೆಗಿನ ಆತಂಕದಿಂದ ಒತ್ತಡದಲ್ಲಿ ಇರುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಪ್ರೇರಣೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿದ್ಯಾರ್ಥಿ ಸ್ನೇಹಿ ಕಾರ್ಯಾಗಾರ ಆಯೋಜಿಸಲಾಗಿದೆ’ ಎಂದು ಹೇಳಿದರು.</p>.<p>‘ಪರೀಕ್ಷೆಗೆ ಸಂಬಂಧಿಸಿದ ಒತ್ತಡ ಮತ್ತು ಭಾವನಾತ್ಮಕ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವುದು, ಭಯ, ಆತಂಕ ಮತ್ತು ಸ್ವಯಂ-ಅನುಮಾನವನ್ನು ನಿರ್ವಹಿಸಲು ದೈನಂದಿನ ಸಂವಹನವು ಒತ್ತಡವನ್ನು ಹೇಗೆ ಕಡಿಮೆ ಮಾಡುತ್ತದೆ ಅಥವಾ ತೀವ್ರಗೊಳಿಸುತ್ತದೆ ಎಂಬುದನ್ನು ಗುರುತಿಸಲು ಪೋಷಕರು ಮತ್ತು ಶಿಕ್ಷಕರಿಗೆ ತಿಳಿಸಿಕೊಡಲಾಗುವುದು. ವಿದ್ಯಾರ್ಥಿಗಳು ಮನೆ ಮತ್ತು ಶಾಲೆಗಳಲ್ಲಿ ಸ್ಥಿರತೆ ಮತ್ತು ಭರವಸೆಯನ್ನು ಅನುಭವಿಸುವಂತೆ ಭಾವನಾತ್ಮಕ ಜೋಡಣೆಯನ್ನು ನಿರ್ಮಿಸುವಲ್ಲಿ ಅಕಾಡೆಮಿ ಸಹಕಾರಿಯಾಗಲಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮೋಹನ ದುರಗಣ್ಣವರ, ಮುಖಂಡರಾದ ಚಂದ್ರಪ್ಪ ಕರಿಕಟ್ಟಿ, ಡಾ. ವೇಮನ ಸಾಹುಕಾರ, ಸಚಿನ್ ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಹುಲಕೋಟಿ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.</p>
<p><strong>ಗದಗ</strong>: ‘ಪರೀಕ್ಷಾ ಅವಧಿಯು ವಿದ್ಯಾರ್ಥಿಯ ಶೈಕ್ಷಣಿಕ ಪ್ರಯಾಣದಲ್ಲಿ ನಿರ್ಣಾಯಕ ಹಂತವಾಗಿದೆ. ವಿದ್ಯಾರ್ಥಿಗಳು ಒತ್ತಡಮುಕ್ತರಾಗಿ ಪರೀಕ್ಷೆಗೆ ಸಜ್ಜಾಗಲು ಕೆ.ಎಚ್. ಪಾಟೀಲ ಕರಿಯರ್ ಅಕಾಡೆಮಿ ನೆರವಾಗಲಿದೆ’ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಹುಲಕೋಟಿಯ ಕೆ.ಎಚ್.ಪಾಟೀಲ ಸಭಾಭವನದಲ್ಲಿ ಕೆ.ಎಚ್. ಪಾಟೀಲ ಕರಿಯರ್ ಅಕಾಡೆಮಿ ವತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಉತ್ಕರ್ಷತೆಯೆಡೆಗೆ’ ವಿದ್ಯಾರ್ಥಿ ಸ್ನೇಹಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ತರಗತಿಗಳಲ್ಲಿ ಶೈಕ್ಷಣಿಕವಾಗಿ ಸಿದ್ಧರಾಗಿದ್ದರೂ ವೈಫಲ್ಯದ ಭಯ, ಇತರರೊಂದಿಗೆ ಹೋಲಿಕೆ ಮತ್ತು ನಿರೀಕ್ಷೆಗಳ ಬಗೆಗಿನ ಆತಂಕದಿಂದ ಒತ್ತಡದಲ್ಲಿ ಇರುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಪ್ರೇರಣೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿದ್ಯಾರ್ಥಿ ಸ್ನೇಹಿ ಕಾರ್ಯಾಗಾರ ಆಯೋಜಿಸಲಾಗಿದೆ’ ಎಂದು ಹೇಳಿದರು.</p>.<p>‘ಪರೀಕ್ಷೆಗೆ ಸಂಬಂಧಿಸಿದ ಒತ್ತಡ ಮತ್ತು ಭಾವನಾತ್ಮಕ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವುದು, ಭಯ, ಆತಂಕ ಮತ್ತು ಸ್ವಯಂ-ಅನುಮಾನವನ್ನು ನಿರ್ವಹಿಸಲು ದೈನಂದಿನ ಸಂವಹನವು ಒತ್ತಡವನ್ನು ಹೇಗೆ ಕಡಿಮೆ ಮಾಡುತ್ತದೆ ಅಥವಾ ತೀವ್ರಗೊಳಿಸುತ್ತದೆ ಎಂಬುದನ್ನು ಗುರುತಿಸಲು ಪೋಷಕರು ಮತ್ತು ಶಿಕ್ಷಕರಿಗೆ ತಿಳಿಸಿಕೊಡಲಾಗುವುದು. ವಿದ್ಯಾರ್ಥಿಗಳು ಮನೆ ಮತ್ತು ಶಾಲೆಗಳಲ್ಲಿ ಸ್ಥಿರತೆ ಮತ್ತು ಭರವಸೆಯನ್ನು ಅನುಭವಿಸುವಂತೆ ಭಾವನಾತ್ಮಕ ಜೋಡಣೆಯನ್ನು ನಿರ್ಮಿಸುವಲ್ಲಿ ಅಕಾಡೆಮಿ ಸಹಕಾರಿಯಾಗಲಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮೋಹನ ದುರಗಣ್ಣವರ, ಮುಖಂಡರಾದ ಚಂದ್ರಪ್ಪ ಕರಿಕಟ್ಟಿ, ಡಾ. ವೇಮನ ಸಾಹುಕಾರ, ಸಚಿನ್ ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಹುಲಕೋಟಿ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.</p>