<p><strong>ನರಗುಂದ:</strong> ‘ಅತಿವೃಷ್ಟಿಯಿಂದಾಗಿ ಹೆಸರು, ಗೋವಿನಜೋಳ, ಹತ್ತಿ, ಈರುಳ್ಳಿ ಬೆಳೆಗಳು ಸಂಪೂರ್ಣ ಹಾಳಾಗಿವೆ. ಪರಿಹಾರ ನೀಡುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ’ ಎಂದು ಕಳಸಾಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಆಕ್ರೋಶ ಹೊರಹಾಕಿದರು.</p>.<p>ಬೆಳೆಹಾನಿ ಸಮೀಕ್ಷೆ ನಡೆಸಿ ವಾರ ಕಳೆದರೂ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಕಳಸಾಬಂಡೂರಿ ಹೋರಾಟ ಸಮಿತಿ ಹಾಗೂ ತಾಲ್ಲೂಕು ಕೃಷಿಕ ಸಮಾಜದ ಆಶ್ರಯದಲ್ಲಿ ಪಟ್ಟಣದ ಶಿವಾಜಿ ವೃತ್ತದಲ್ಲಿ ಶನಿವಾರ ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದರು.</p>.<p>‘ಸರ್ಕಾರ ಯೂರಿಯಾ ಗೊಬ್ಬರದ ದಾಸ್ತಾನನ್ನು ಸಕಾಲಿಕವಾಗಿ ಮಾಡಲಾರದೇ ಗೋವಿನಜೋಳ ಬೆಳೆ ಹಾಳಾಯಿತು. ರೈತರಿಗೆ ನಷ್ಟ ಉಂಟಾಯಿತು. ಎಲ್ಲ ಬೆಳೆಗಳ ನಷ್ಟಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ’ ಎಂದು ಆರೋಪ ಮಾಡಿದರು.</p>.<p>‘ಹೆಸರು ಇಳುವರಿ ತುಂಬ ಕಡಿಮೆಯಾಗಿದೆ. ಬೆಲೆ ಕುಸಿದಿರುವ ಕಾರಣ ಅದನ್ನು ಮಾರಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಶೀಘ್ರವಾಗಿ ಖರೀದಿ ಕೇಂದ್ರ ಪ್ರಾರಂಭಿಸಬೇಕು. ಎಲ್ಲ ರೈತರ ಹೆಸರು ಕಾಳನ್ನು ಕಡ್ಡಾಯವಾಗಿ ಖರೀದಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಬೆಳೆ ನಷ್ಟ ಪರಿಹಾರ ವಿತರಣೆಗೆ ಸರ್ಕಾರ ಶೀಘ್ರ ಕ್ರಮವಹಿಸಬೇಕು. ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ಇಲ್ಲವಾದರೆ ಅಹೋರಾತ್ರಿ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಕಳಸಾಬಂಡೂರಿ ಹೋರಾಟ ಸಮಿತಿ ಹಾಗೂ ತಾಲ್ಲೂಕು ಕೃಷಿಕ ಸಮಾಜದ ಸದಸ್ಯರು, ವಿವಿಧ ಗ್ರಾಮಗಳ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ‘ಅತಿವೃಷ್ಟಿಯಿಂದಾಗಿ ಹೆಸರು, ಗೋವಿನಜೋಳ, ಹತ್ತಿ, ಈರುಳ್ಳಿ ಬೆಳೆಗಳು ಸಂಪೂರ್ಣ ಹಾಳಾಗಿವೆ. ಪರಿಹಾರ ನೀಡುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ’ ಎಂದು ಕಳಸಾಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಆಕ್ರೋಶ ಹೊರಹಾಕಿದರು.</p>.<p>ಬೆಳೆಹಾನಿ ಸಮೀಕ್ಷೆ ನಡೆಸಿ ವಾರ ಕಳೆದರೂ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಕಳಸಾಬಂಡೂರಿ ಹೋರಾಟ ಸಮಿತಿ ಹಾಗೂ ತಾಲ್ಲೂಕು ಕೃಷಿಕ ಸಮಾಜದ ಆಶ್ರಯದಲ್ಲಿ ಪಟ್ಟಣದ ಶಿವಾಜಿ ವೃತ್ತದಲ್ಲಿ ಶನಿವಾರ ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದರು.</p>.<p>‘ಸರ್ಕಾರ ಯೂರಿಯಾ ಗೊಬ್ಬರದ ದಾಸ್ತಾನನ್ನು ಸಕಾಲಿಕವಾಗಿ ಮಾಡಲಾರದೇ ಗೋವಿನಜೋಳ ಬೆಳೆ ಹಾಳಾಯಿತು. ರೈತರಿಗೆ ನಷ್ಟ ಉಂಟಾಯಿತು. ಎಲ್ಲ ಬೆಳೆಗಳ ನಷ್ಟಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ’ ಎಂದು ಆರೋಪ ಮಾಡಿದರು.</p>.<p>‘ಹೆಸರು ಇಳುವರಿ ತುಂಬ ಕಡಿಮೆಯಾಗಿದೆ. ಬೆಲೆ ಕುಸಿದಿರುವ ಕಾರಣ ಅದನ್ನು ಮಾರಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಶೀಘ್ರವಾಗಿ ಖರೀದಿ ಕೇಂದ್ರ ಪ್ರಾರಂಭಿಸಬೇಕು. ಎಲ್ಲ ರೈತರ ಹೆಸರು ಕಾಳನ್ನು ಕಡ್ಡಾಯವಾಗಿ ಖರೀದಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಬೆಳೆ ನಷ್ಟ ಪರಿಹಾರ ವಿತರಣೆಗೆ ಸರ್ಕಾರ ಶೀಘ್ರ ಕ್ರಮವಹಿಸಬೇಕು. ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ಇಲ್ಲವಾದರೆ ಅಹೋರಾತ್ರಿ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಕಳಸಾಬಂಡೂರಿ ಹೋರಾಟ ಸಮಿತಿ ಹಾಗೂ ತಾಲ್ಲೂಕು ಕೃಷಿಕ ಸಮಾಜದ ಸದಸ್ಯರು, ವಿವಿಧ ಗ್ರಾಮಗಳ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>