<p><strong>ಮುಂಡರಗಿ:</strong> ವಿವಿಧ ಬೆಳೆಗಳ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಬೇಕು ಆಗ್ರಹಿಸಿ ತಾಲ್ಲೂಕಿನ ನೂರಾರು ರೈತರು ಮಂಗಳವಾರ ತಹಶೀಲ್ದಾರ್ ಕಾರ್ಯಾಲಯ ಎದುರಿನ ರಾಜ್ಯ ಹೆದ್ದಾರಿ ಮೇಲೆ ಧರಣಿ ನಡೆಸಿದರು.</p>.<p>ಕೋಟೆ ಆಂಜನೇಯ ದೇವಸ್ಥಾನದಿಂದ ಟ್ರ್ಯಾಕ್ಟರ್ಗಳ ಮೂಲಕ ಬೃಹತ್ ಪ್ರತಿಭಟನೆ ಆರಂಭಿಸಿದ ರೈತರು ಜಾಗೃತ ವೃತ್ತ, ಗಾಂಧೀ ವೃತ್ತ, ಅಂಬಾ ಭವಾನಿ ನಗರ, ಕೇಂದ್ರ ಬಸ್ ನಿಲ್ದಾಣ, ಕೊಪ್ಪಳ ವೃತ್ತ ಮಾರ್ಗವಾಗಿ ಸಂಚರಿಸಿ ತಹಶೀಲ್ದಾರ್ ಕಾರ್ಯಾಲಯ ಎದುರು ಧರಣಿ ಆರಂಭಿಸಿದರು.</p>.<p>ತಾಲ್ಲೂಕಿನಲ್ಲಿ ಸಾವಿರಾರು ಎಕರೆ ಜಮೀನಿನಲ್ಲಿ ಮೆಕ್ಕೆಜೋಳ, ಈರುಳ್ಳಿ, ಭತ್ತ, ತೊಗರಿ, ಶೇಂಗಾ ಮೊದಲಾದ ಬೆಳೆಗಳನ್ನು ರೈತರು ಬೆಳೆದಿದ್ದು, ಬೆಳೆಗಳಿಗೆ ಸೂಕ್ತ ಬೆಲೆ ಲಭಿಸದ ಕಾರಣ ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ತಕ್ಷಣ ತಾಲ್ಲೂಕಿನ ಪ್ರಮುಖ ಭಾಗಗಳಲ್ಲಿ ಖರೀದಿ ಕೇಂದ್ರ ತೆರೆಯಬೇಕು’ ಎಂದು ಆಗ್ರಹಿಸಿದರು.</p>.<p>ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹಾಗೂ ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್ ಪ್ರತಿಭಟನಾ ನಿರತ ರೈತರೊಂದಿಗೆ ಚರ್ಚಿಸಿ, ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೊಂದಿಗೆ ಚರ್ಚಿಸಿ ಖರೀದಿ ಕೇಂದ್ರ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಶಿವಾನಂದ ಇಟಗಿ, ರೈತ ಮುಖಂಡರಾದ ಚಂದ್ರಕಾಂತ ಉಳ್ಳಾಗಡ್ಡಿ, ಕೆ.ಎ. ದೇಸಾಯಿ, ಶಂಕರಗೌಡ ಜಾಯನಗೌಡ್ರ, ಶಿವನಗೌಡ್ರ ಗೌಡ್ರ, ಶರಣಪ್ಪ ಕಂಬಳಿ, ಶರಣಪ್ಪ ಚನ್ನಳ್ಳಿ, ಮಂಜುನಾಥ ಮುಧೋಳ, ಅಶ್ವಿನಿ ಗೌಡರ ಇದ್ದರು.</p>.<p><strong>ಶೀಘ್ರ ರೈತರ ವಿವಿಧ ಬೇಡಿಕೆ ಈಡೇರಿಸಿ</strong></p><p> ಅತೀವೃಷ್ಟಿಯಿಂದ ಹಾನಿಯಾದ ರೈತರ ಬೆಳೆಗಳಿಗೆ ಬೆಳೆಹಾನಿ ಪರಿಹಾರ ಹಾಗೂ ಬೆಳೆವಿಮೆ ಪರಿಹಾರ ಬೆಳೆ ಒಕ್ಕಲು ಕಾರ್ಯ ನಡೆಸಲು ಖಣ ನಿರ್ಮಾಣ ಹಾಗೂ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಪೂರೈಕೆ ಪ್ರತಿ ಟನ್ ಕಬ್ಬಿಗೆ ₹3300 ಬೆಲೆ ರೈತರ ಸಾಲ ಮನ್ನಾ ಸೇರಿದಂತೆ ಶಿಂಗಟಾಲೂರ ಏತ ನೀರಾವರಿ ಯೊಜನೆಯ ಅಡಿಯಲ್ಲಿ ಕಾಲುವೆ ಮೂಲಕ ರೈತರ ಜಮೀನಿಗೆ ನೀರು ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ವಿವಿಧ ಬೆಳೆಗಳ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಬೇಕು ಆಗ್ರಹಿಸಿ ತಾಲ್ಲೂಕಿನ ನೂರಾರು ರೈತರು ಮಂಗಳವಾರ ತಹಶೀಲ್ದಾರ್ ಕಾರ್ಯಾಲಯ ಎದುರಿನ ರಾಜ್ಯ ಹೆದ್ದಾರಿ ಮೇಲೆ ಧರಣಿ ನಡೆಸಿದರು.</p>.<p>ಕೋಟೆ ಆಂಜನೇಯ ದೇವಸ್ಥಾನದಿಂದ ಟ್ರ್ಯಾಕ್ಟರ್ಗಳ ಮೂಲಕ ಬೃಹತ್ ಪ್ರತಿಭಟನೆ ಆರಂಭಿಸಿದ ರೈತರು ಜಾಗೃತ ವೃತ್ತ, ಗಾಂಧೀ ವೃತ್ತ, ಅಂಬಾ ಭವಾನಿ ನಗರ, ಕೇಂದ್ರ ಬಸ್ ನಿಲ್ದಾಣ, ಕೊಪ್ಪಳ ವೃತ್ತ ಮಾರ್ಗವಾಗಿ ಸಂಚರಿಸಿ ತಹಶೀಲ್ದಾರ್ ಕಾರ್ಯಾಲಯ ಎದುರು ಧರಣಿ ಆರಂಭಿಸಿದರು.</p>.<p>ತಾಲ್ಲೂಕಿನಲ್ಲಿ ಸಾವಿರಾರು ಎಕರೆ ಜಮೀನಿನಲ್ಲಿ ಮೆಕ್ಕೆಜೋಳ, ಈರುಳ್ಳಿ, ಭತ್ತ, ತೊಗರಿ, ಶೇಂಗಾ ಮೊದಲಾದ ಬೆಳೆಗಳನ್ನು ರೈತರು ಬೆಳೆದಿದ್ದು, ಬೆಳೆಗಳಿಗೆ ಸೂಕ್ತ ಬೆಲೆ ಲಭಿಸದ ಕಾರಣ ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ತಕ್ಷಣ ತಾಲ್ಲೂಕಿನ ಪ್ರಮುಖ ಭಾಗಗಳಲ್ಲಿ ಖರೀದಿ ಕೇಂದ್ರ ತೆರೆಯಬೇಕು’ ಎಂದು ಆಗ್ರಹಿಸಿದರು.</p>.<p>ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹಾಗೂ ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್ ಪ್ರತಿಭಟನಾ ನಿರತ ರೈತರೊಂದಿಗೆ ಚರ್ಚಿಸಿ, ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೊಂದಿಗೆ ಚರ್ಚಿಸಿ ಖರೀದಿ ಕೇಂದ್ರ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಶಿವಾನಂದ ಇಟಗಿ, ರೈತ ಮುಖಂಡರಾದ ಚಂದ್ರಕಾಂತ ಉಳ್ಳಾಗಡ್ಡಿ, ಕೆ.ಎ. ದೇಸಾಯಿ, ಶಂಕರಗೌಡ ಜಾಯನಗೌಡ್ರ, ಶಿವನಗೌಡ್ರ ಗೌಡ್ರ, ಶರಣಪ್ಪ ಕಂಬಳಿ, ಶರಣಪ್ಪ ಚನ್ನಳ್ಳಿ, ಮಂಜುನಾಥ ಮುಧೋಳ, ಅಶ್ವಿನಿ ಗೌಡರ ಇದ್ದರು.</p>.<p><strong>ಶೀಘ್ರ ರೈತರ ವಿವಿಧ ಬೇಡಿಕೆ ಈಡೇರಿಸಿ</strong></p><p> ಅತೀವೃಷ್ಟಿಯಿಂದ ಹಾನಿಯಾದ ರೈತರ ಬೆಳೆಗಳಿಗೆ ಬೆಳೆಹಾನಿ ಪರಿಹಾರ ಹಾಗೂ ಬೆಳೆವಿಮೆ ಪರಿಹಾರ ಬೆಳೆ ಒಕ್ಕಲು ಕಾರ್ಯ ನಡೆಸಲು ಖಣ ನಿರ್ಮಾಣ ಹಾಗೂ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಪೂರೈಕೆ ಪ್ರತಿ ಟನ್ ಕಬ್ಬಿಗೆ ₹3300 ಬೆಲೆ ರೈತರ ಸಾಲ ಮನ್ನಾ ಸೇರಿದಂತೆ ಶಿಂಗಟಾಲೂರ ಏತ ನೀರಾವರಿ ಯೊಜನೆಯ ಅಡಿಯಲ್ಲಿ ಕಾಲುವೆ ಮೂಲಕ ರೈತರ ಜಮೀನಿಗೆ ನೀರು ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>